ಈ ಬ್ಲಾಗ್ ಅನ್ನು ಹುಡುಕಿ

ಶುಕ್ರವಾರ, ಜನವರಿ 12, 2018

ಆಲುಗಡ್ಡೆಯಿಂದ ಇಷ್ಟೆಲ್ಲಾ ಉಪಯೋಗಗಳಿವೆ ಎಂದು ನಿಮಗೆ ಈ ಮೊದಲು ಗೊತ್ತಿತ್ತೇ?

ಬೋಲ್ಡ್ ಸ್ಕೈ. ಕಾಂ ತಾಣದಲ್ಲಿ ಪ್ರಕಟವಾದ ಲೇಖನ
https://tinyurl.com/yc3sv8sp

ಹೆಚ್ಚು ಕಾಲ ಕೆಡದೇ ಇರುವ, ಅಗ್ಗವಾದ, ವರ್ಷದ ಎಲ್ಲಾ ಋತುಗಳಲ್ಲೂ ಲಭ್ಯವಿರುವ ತರಕಾರಿಗಳೆಂದರೆ ಆಲುಗಡ್ಡೆ ಮತ್ತು ನೀರುಳ್ಳಿ. ಬಡವರ ನೆಚ್ಚಿನ ಈ ಆಲುಗಡ್ಡೆಯನ್ನು ಉದ್ದದ ಬೆರಳುಗಳಂತೆ ಚೌಕಾಕಾರದಲ್ಲಿ ಕತ್ತರಿಸಿ ಎಣ್ಣೆಯಲ್ಲಿ ಹುರಿದು ಚೆಂದದ ಕಾಗದದ ಪೊಟ್ಟಣದಲ್ಲಿ ಕಟ್ಟಿಕೊಟ್ಟರೆ ಶ್ರೀಮಂತರಿಗೆ ಅದು ದುಬಾರಿಬೆಲೆಯ ಸ್ವಾದಿಷ್ಟ ಖಾದ್ಯ. ರೆಸಿಪಿಗಳಲ್ಲಿ ಹುಡುಕಹೊರಟರೆ ಆಲು ಜೊತೆಗಿನ ಇತರ ಸಾಮಾಗ್ರಿಗಳನ್ನು ಉಪಯೋಗಿಸಿ ತಯಾರಿಸಬಹುದಾದ ಖಾದ್ಯಗಳ ಪಟ್ಟಿ ನೂರಕ್ಕೂ ಹೆಚ್ಚಿವೆ. ಇದರಲ್ಲಿರುವ ವಿಟಮಿನ್ ಬಿ, ಸಿ, ಕಬ್ಬಿಣ, ಕ್ಯಾಲ್ಸಿಯಂ, ಮ್ಯಾಂಗನೀಸ್, ಗಂಧಕ ಮೊದಲಾದ ಪೋಷಕಾಂಶಗಳು ಆರೋಗ್ಯವನ್ನು ವೃದ್ಧಿಸುವ ಜೊತೆಗೇ ಕೊಬ್ಬನ್ನು ಕರಗಿಸುವ ಮೂಲಕ ತೂಕ ಇಳಿಯಲೂ ನೆರವಾಗುತ್ತವೆ. ಆಲುಗಡ್ಡೆಯನ್ನು ಚೆನ್ನಾಗಿ ಹುರಿದು ತಿನ್ನುವುದರಿಂದ ಕೊಬ್ಬು ಕಡಿಮೆಯಾಗುತ್ತದೆ.
ಆಲುಗಡ್ಡೆ ಬೇಯಿಸಿದ ನೀರು ಕೂದಲಿಗೆ ಉತ್ತಮ

ಆದರೆ ಆಲುಗಡ್ಡೆಯ ಉಪಯೋಗ ಅಡುಗೆಗೆ ಹೊರತಾಗಿಯೂ ಬಹಳಷ್ಟಿದೆ. ಇದರ ಪರ್ಯಾಯ ಉಪಯೋಗಗಳಲ್ಲಿ ಪ್ರಮುಖವಾದುವನ್ನು ಕೆಳಗಿನ ಸ್ಲೈಡ್ ಷೋ ಮೂಲಕ ವಿವರಿಸಲಾಗಿದೆ:

ಆಲುಗಡ್ಡೆ ಬೇಯಿಸಿದ ನೀರು ಕೂದಲಿಗೆ ಉತ್ತಮ
೧) ಆಲುಗಡ್ಡೆ ಬೇಯಿಸಿದ ನೀರು ಕೂದಲಿಗೆ ಉತ್ತಮ
ಆಲುಗಡ್ಡೆಯನ್ನು ಬೇಯಿಸಿದ ಬಳಿಕ ಉಳಿದ ನೀರನ್ನು ಚೆಲ್ಲಬೇಡಿ, ಬದಲಿಗೆ ತಣಿದ ಬಳಿಕ ಇದೇ ನೀರಿಗೆ ಒಂದು ಬೆಂದಿರುವ ಆಲುಗಡ್ಡೆಯನ್ನು ಚೆನ್ನಾಗಿ ಕಿವುಚಿ ನೀರನ್ನು ಗಾಢವಾಗಿಸಿ. ಈ ನೀರಿನಿಂದ ಕೂದಲನ್ನು ತೊಳೆದುಕೊಂಡರೆ ಕೂದಲಿಗೆ ಅಪ್ರತಿಮ ಕಾಂತಿ ದೊರಕುತ್ತದೆ. ಕೂದಲ ಬುಡಗಳನ್ನು ದೃಢಗೊಳಿಸುವ ಮೂಲಕ ಉದುರುವುದನ್ನು ನಿಯಂತ್ರಿಸುತ್ತದೆ ಅಲ್ಲದೇ ತಲೆಹೊಟ್ಟನ್ನೂ ನಿವಾರಿಸುತ್ತದೆ.
ರಕ್ತದೊತ್ತಡ ಕಡಿಮೆಗೊಳಿಸುತ್ತದೆ
೨) ರಕ್ತದೊತ್ತಡ ಕಡಿಮೆಗೊಳಿಸುತ್ತದೆ.
ಒಂದು ವೇಳೆ ನಿಮಗೆ ಅಧಿಕ ರಕ್ತದೊತ್ತಡದ ತೊಂದರೆಯಿದ್ದಲ್ಲಿ, ನಿಮ್ಮ ಆಹಾರದಲ್ಲಿ ಸಾಕಷ್ಟು ಆಲುಗಡ್ಡೆಗಳಿರುವಂತೆ ನೋಡಿಕೊಳ್ಳುವುದರಿಂದ ಶೀಘ್ರವೇ ಸಾಮಾನ್ಯ ಸ್ಥಿತಿಗೆ ಬರಲು ಸಾಧ್ಯವಾಗುತ್ತದೆ.
ಮಲಬದ್ಧತೆ ನಿವಾರಿಸುತ್ತದೆ
೩) ಮಲಬದ್ದತೆ ನಿವಾರಿಸುತ್ತದೆ.
ಮಲಬದ್ಧತೆ ನಿವಾರಿಸುತ್ತದೆ
ಒಂದು ವೇಳೆ ಮಲಬದ್ದತೆಯ ತೊಂದರೆ ಇದ್ದರೆ ಒಂದೆರಡು ಆಲುಗಡ್ಡೆಗಳನ್ನು ಎಣ್ಣೆಯಲ್ಲಿ ಚೆನ್ನಾಗಿ ಕರಿದು ತಿನ್ನುವ ಮೂಲಕ ಮಲಬದ್ದತೆಯ ತೊಂದರೆ ದೂರವಾಗುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ ಲವಣ ಹೊಟ್ಟೆಯಲ್ಲಿ ಆಮ್ಲೀಯತೆಗೆ ಕಾರಣವಾಗುವ ದ್ರವಗಳನ್ನು ನಿಷ್ಕ್ರಿಯಗೊಳಿಸುವ ಮೂಲಕ ಹೊಟ್ಟೆಯುರಿ ಮೊದಲಾದ ತೊಂದರೆಗಳಿಂದ ತಪ್ಪಿಸುತ್ತದೆ.

೪) ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ.
ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ
ನಿಯಮಿತವಾಗಿ ಮುಖದ ಚರ್ಮವನ್ನು ಆಲುಗಡ್ಡೆಯ ಚಿಕ್ಕದಾಗಿ ತುರಿದ ಪುಡಿಯಿಂದ ಸುಮಾರು ಹತ್ತರಿಂದ ಹದಿನೈದು ನಿಮಿಷ ಮಸಾಜ್ ಮಾಡಿಕೊಳ್ಳುವ ಮೂಲಕ ಸಹಜವಾದ ಕಾಂತಿಯನ್ನು ಪಡೆಯಬಹುದು.

೫) ಮೊಡವೆಗಳನ್ನು ನಿವಾರಿಸುತ್ತದೆ.
ಮೊಡವೆಗಳನ್ನು ನಿವಾರಿಸುತ್ತದೆ
ಮೊಡವೆಗಳ ತೊಂದರೆಯಿದ್ದರೆ ಒಂದು ಚಮಚ ಆಲುಗಡ್ಡೆಯ ರಸಕ್ಕೆ ಕೆಲವು ಹನಿ ಲಿಂಬೆರಸವನ್ನು ಸೇರಿಸಿ ಮಿಶ್ರಣ ಮಾಡಿ ಮೊಡವೆಗಳ ಮೇಲೆ ಹಚ್ಚಿಕೊಳ್ಳುವ ಮೂಲಕ ಮೊಡವೆಗಳನ್ನು ನಿವಾರಿಸುವುದು ಮಾತ್ರವಲ್ಲ, ಮತ್ತೆ ಬರದಂತೆಯೂ ತಡೆಯಬಹುದು. 


೬) ಚರ್ಮದಡಿಯ ಗಂಟುಗಳನ್ನು ನಿವಾರಿಸುತ್ತದೆ.
ಚರ್ಮದಡಿಯ ಗಂಟುಗಳನ್ನು ನಿವಾರಿಸುತ್ತದೆ
ಕೆಲವೊಮ್ಮೆ ಚರ್ಮದಡಿಯಲ್ಲಿ ಕೆಲವು ಗ್ರಂಥಿಗಳು ಸ್ರವಿತವಾಗಿ ಗಂಟುಗಳು ಉಂಟಾಗುತ್ತವೆ. ಇದಕ್ಕೆ ಒಂದು ಉದಾಹರಣೆ ಮಣಿಕಟ್ಟಿನಲ್ಲಿ ಉಂಟಾಗುವ ಗ್ಯಾಂಗ್ಲಿಯಾನ್ ಎಂಬ ಗಂಟು. ಇದನ್ನು ನಿವಾರಿಸಲು ಸುಮಾರು ಮೂರು ಅಥವಾ ನಾಲ್ಕು ಆಲುಗಡ್ದೆಗಳನ್ನು ನೇರವಾಗಿ ಬೆಂಕಿಯ ಮೇಲಿಟ್ಟು ಸುಡಬೇಕು. ಬಳಿಕ ಸಿಪ್ಪೆ ಸುಲಿದು ಉಪ್ಪು ಮತ್ತು ಕಾಳುಮೆಣಸಿನ ಪುಡಿಯನ್ನು ಚಿಮುಕಿಸಿಕೊಂದು ಬಿಸಿಬಿಸಿಯಾಗಿಯೇ ತಿನ್ನಬೇಕು. ಇದರಿಂದ ಗಂಟುಗಳು ಕರಗತೊಡಗುತ್ತವೆ.

೭) ಹೆರಿಗೆಯ ರೇಖೆಗಳನ್ನು ನಿವಾರಿಸುತ್ತದೆ.

ಒಂದು ಚಮಚ ಮುಲ್ತಾನಿ ಮಿಟ್ಟಿಗೆ ಅರ್ಧ ಚಮಚದಷ್ಟು ಹಸಿ ಆಲುಗಡ್ಡೆಯ ರಸವನ್ನು ಸೇರಿಸಿ ಮಿಶ್ರಣ ಮಾಡಿಕೊಳ್ಳಿ. ಇದನ್ನು ಹರಿಗೆಯ ರೇಖೆಗಳ ಮೇಲೆ ಮತ್ತು ಮುಖದ ನೆರಿಗೆಗಳ ಮೇಲೆ ಹಚ್ಚಿಕೊಳ್ಳುವ ಮೂಲಕ ಈ ಸ್ಥಳಗಳೂ ಅಕ್ಕಪಕ್ಕದ ಚರ್ಮದ ಬಣ್ಣವನ್ನೇ ಪಡೆದು ರೇಖೆಗಳು ಮಾಯವಾಗುತ್ತವೆ.

೮) ಬಿಸಿಲಿನ ಝಳಕ್ಕೆ ಒಣಗಿದ ಬಣ್ಣವನ್ನು ನಿವಾರಿಸುತ್ತದೆ.
ಊತವನ್ನು ನಿವಾರಿಸುತ್ತದೆ
ಬಿಸಿಲಿಗೆ ಒಡ್ಡಿರುವ ಚರ್ಮದ ಭಾಗದ ಬಣ್ಣ ಬದಲಾಗಿದ್ದು ಇದನ್ನು ನಿಜವರ್ಣಕ್ಕೆ ತರಲು ಹಸಿ ಆಲುಗಡ್ಡೆಯನ್ನು ಅಡ್ಡಲಾಗಿ ಕತ್ತರಿಸಿ ಅದರಿಂದ ಬಿಸಿಲಿಗೆ ಒಡ್ಡಿ ಬಣ್ಣಬದಲಾದ ಚರ್ಮದ ಭಾಗಕ್ಕೆ ಹಚ್ಚಿಕೊಳ್ಳಿ. ಇದರಿಂದ ನಿಧಾನವಾಗಿ ಚರ್ಮ ಸಹಜವರ್ಣದತ್ತ ಬದಲಾಗುತ್ತದೆ.

೯) ಊತವನ್ನು ನಿವಾರಿಸುತ್ತದೆ.
ಅಲರ್ಜಿಗಳಿಗೆ ಉತ್ತಮವಾಗಿದೆ
ಕೆಲವೊಮ್ಮೆ ಪೆಟ್ಟು ಬಿದ್ದು ಅಥವಾ ಬೇರಾವುದೋ ಕಾರಣದಿಂದ ದೇಹದ ಯಾವುದಾದರೂ ಭಾಗಕ್ಕೆ ಬಾವು ಅಥವಾ ಊತ ಬಂದಿದ್ದರೆ ಆ ಸ್ಥಳಕ್ಕೆ ಆಲುಗಡ್ಡೆ ಬೇಯಿಸಿದ್ದ ನೀರಿನಿಂದ ಅದ್ದಿದ ಬಟ್ಟೆಯನ್ನು ಕಟ್ಟುವ ಮೂಲಕ ಕಡಿಮೆಯಾಗುತ್ತದೆ. ಇದಕ್ಕಾಗಿ ಒಂದು ಪಾತ್ರೆಯಲ್ಲಿ ಒಂದು ಅಥವಾ ಎರಡು ಆಲುಗಡ್ಡೆಯನ್ನು ಕತ್ತರಿಸಿ ಚಿಕ್ಕ ತುಂಡುಗಳನ್ನಾಗಿಸಿ ಹಾಕಿ. ಈ ತುಂಡುಗಳ ಒಟ್ಟು ತೂಕದ ಎರಡರಷ್ಟು ತೂಕದ ನೀರನ್ನು ಸೇರಿಸಿ. ಉದಾಹರಣೆಗೆ ಐವತ್ತು ಗ್ರಾಂ ಆಲುಗಡ್ಡೆಯಿದ್ದರೆ ನೀರು ನೂರು ಗ್ರಾಂ ಇರಬೇಕು. ಹೆಚ್ಚು ಕಡಿಮೆ ಆಗಬಾರದು. ಈ ನೀರನ್ನು ಚೆನ್ನಾಗಿ ಕುದಿಸಿ ತಣಿಸಿ. ತಣಿದ ನೀರನ್ನು ಸ್ವಚ್ಛವಾದ ಬಟ್ಟೆಯಲ್ಲಿ ಅದ್ದಿ ಬಾವು ಬಂದ ಸ್ಥಳದ ಮೇಲೆ ಇಡಿಯ ರಾತ್ರಿ ಕಟ್ಟುವುದರಿಂದ ಬಾವು ಕಡಿಮೆಯಾಗುತ್ತದೆ.

೧೦) ಅಲರ್ಜಿಗಳಿಗೆ ಉತ್ತಮವಾಗಿದೆ
ಮೂಲವ್ಯಾಧಿಯನ್ನು ಗುಣಪಡಿಸುತ್ತದೆ
ಹಸಿ ಆಲುಗಡ್ಡೆಯ ರಸವನ್ನು ಸೇವಿಸುವುದರಿಂದ ಹಲವು ವಿಧದ ಅಲರ್ಜಿಗಳು ದೂರವಾಗುತ್ತವೆ.

೧೧) ಮೂಲವ್ಯಾಧಿಯನ್ನು ಗುಣಪಡಿಸುತ್ತದೆ.
ನೆರಿಗೆಗಳನ್ನು ನಿವಾರಿಸುತ್ತದೆ
ಮೂಲವ್ಯಾಧಿಯ ರೋಗಿಗಳು ಆಲುಗಡ್ಡೆಯನ್ನು ಚೆನ್ನಾಗಿ ಬೇಯಿಸಿ ತಯಾರಿಸಿದ ಸೂಪ್ ಕುಡಿಯುವ ಮೂಲಕ ಶಮನ ಪಡೆಯಬಹುದು. 

೧೨) ನೆರಿಗೆಗಳನ್ನು ನಿವಾರಿಸುತ್ತದೆ.
ಚರ್ಮದ ಕಾಂತಿ ಹೆಚ್ಚಲು
ಹಸಿ ಆಲುಗಡ್ಡೆಯ ರಸದಿಂದ ನೆರಿಗೆಗಳಿರುವ ಭಾಗದಲ್ಲಿ ನಯವಾಗಿ ಮಸಾಜ್ ಮಾಡಿದರೆ ನೆರಿಗೆಗಳು ದೂರವಾಗುತ್ತವೆ.

೧೩) ಚರ್ಮದ ಕಾಂತಿ ಹೆಚ್ಚಲು
ಆಲುಗಡ್ಡೆ ಬೇಯಿಸಿದ್ದ ನೀರನ್ನು ಚೆಲ್ಲದೇ ಸ್ನಾನ ಮಾಡಲು ತೆಗೆದಿರಿಸಿದ ನೀರಿನಲ್ಲಿ ಸೇರಿಸಿ ಸ್ನಾನ ಮಾಡುವ ಮೂಲಕ ಚರ್ಮದ ಕಾಂತಿ ಹೆಚ್ಚುತ್ತದೆ. 

ಭಾನುವಾರ, ಜನವರಿ 7, 2018

ಮರುಬಿಸಿ ಮಾಡಲೇಬಾರದ, ಮಾಡಿದರೆ ವಿಷವಾಗುವ ಏಳು ಆಹಾರಗಳು

-ಅರ್ಶದ್ ಹುಸೇನ್ ಎಂ.ಹೆಚ್, ದುಬೈ
ಬೋಲ್ಡ್ ಸ್ಕೈ.ಕಾಂ ತಾಣದಲ್ಲಿ ಪ್ರಕಟವಾದ ಲೇಖನ
https://goo.gl/9i7Q3M


ಇಂದು ಮನೆಮನೆಯಲ್ಲಿರುವ ಫ್ರಿಜ್ ಗೆ ತಂಗಳುಪೆಟ್ಟಿಗೆ ಎಂಬ ಅನ್ವರ್ಥನಾಮವಿದೆ. ಏಕಾಗಿ ತಂಗಳು ಈ ಫ್ರಿಜ್ಜಿಗೆ ಅಂಟಿಕೊಂಡಿತು? ನಮ್ಮ ಹಿರಿಯರ ಕಾಲದಲ್ಲಿ ಫ್ರಿಜ್ ಇಲ್ಲದಿದ್ದುದರಿಂದ ಇಂದು ಮಾಡಿದ ಅಡುಗೆಯನ್ನು ನಾಳೆಗಾಗಿ ಇಡುವ ಪದ್ದತಿ ಇರಲಿಲ್ಲ. ಮರುದಿನಕ್ಕೆ ಅದು ಕೊಂಚ ಹಾಳಾಗುವ ಹಂತದಲ್ಲಿರುತ್ತಿತ್ತು. ಇದನ್ನು ತಿಂದರೆ ಆರೋಗ್ಯ ಕೆಡುವ ಸಂಭವಿದ್ದುದರಿಂದ ಎಸೆದುಬಿಡುತ್ತಿದ್ದರು. ಆದರೆ ಒಪ್ಪೊತ್ತು ಊಟಕ್ಕೂ ಗತಿಯಿಲ್ಲದ ಬಡವರು ಈ ಊಟವನ್ನು ಸೇವಿಸಲು ಸಿದ್ಧರಿಸುತ್ತಿದ್ದರು. ಇದಕ್ಕಾಗಿಯೇ ಇದಕ್ಕೆ ತಂಗಳು ಎಂಬ ಹೆಸರು ಬಂದಿದೆ. ಇಂದು ಫ್ರಿಜ್ ನಲ್ಲಿಟ್ಟ ಆಹಾರವನ್ನು ಮರುದಿನವೂ ಬಳಸಬಹುದಾದುದರಿಂದ ಇದಕ್ಕೆ ತಂಗಳುಪೆಟ್ಟಿಗೆ ಎನ್ನುತ್ತಾರೆ.

ಆದರೆ ಎಲ್ಲಾ ಆಹಾರಗಳೂ ಫ್ರಿಜ್ಜಿನಲ್ಲಿಟ್ಟರೂ ಮರುದಿನದ ಬಳಕೆಗೆ ಯೋಗ್ಯವಲ್ಲ. ಆಹಾರತಜ್ಞರು ಈ ಬಗ್ಗೆ ನಡೆಸಿದ ಸಂಶೋಧನೆಗಳಿಂದ ಕೆಲವು ಆಹಾರಗಳು ಫ್ರಿಜ್ಜಿನಲ್ಲಿಟ್ಟರೂ ಒಳಗೇ ಕೆಲವು ರಾಸಾಯನಿಕಗಳ ಉತ್ಪತ್ತಿಯಿಂದ ವಿಷಕರವಾಗುವುದನ್ನು ಪ್ರಕಟಿಸಿದ್ದಾರೆ. ಈ ಆಹಾರಗಳನ್ನು ಮತ್ತೊಮ್ಮೆ ಬಿಸಿ ಮಾಡಿದರೆ ಈ ರಾಸಾಯನಿಕಗಳು ಆಹಾರದಲ್ಲಿದ್ದ ಪೋಷಕಾಂಶಗಳ ಗುಣವನ್ನು ಕೆಡಿಸಿ ಆರೋಗ್ಯಕ್ಕೆ ಮಾರಕವಾದ ವಿಷವನ್ನಾಗಿ ಪರಿವರ್ತಿಸಿಬಿಡುತ್ತವೆ. ಈ ಬಗ್ಗೆ ಅರಿವಿರದೇ ತಂಗಳನ್ನು ಬಿಸಿಮಾಡಿ ಆರೋಗ್ಯ ಕೆಡಿಸಿಕೊಳ್ಳುವ ಮುನ್ನ ನಮ್ಮ ಕುಟುಂಬವನ್ನು ರಕ್ಷಿಸಿಕೊಳ್ಳಲು ಅರಿವು ಅಗತ್ಯವಾಗಿದೆ. ಇದರಲ್ಲಿ ಪ್ರಮುಖವಾದ ಏಳು ಆಹಾರಗಳನ್ನು ಕೆಳಗಿನ ಸ್ಲೈಡ್ ಷೋ ಮೂಲಕ ವಿವರಿಸಲಾಗಿದೆ.

೧) ಆಲುಗಡ್ಡೆ
ಆಲುಗಡ್ಡೆ
ಐರ್ಲೆಂಡ್, ಈಜಿಪ್ಟ್, ಕೀನ್ಯಾ, ಸೋಮಾಲಿಯಾ ಮೊದಲಾದ ಆಫ್ರಿಕದ ದೇಶಗಳಿಗೆ ಆಲುಗಡ್ಡೆಯೇ ಪ್ರಮುಖ ಆಹಾರ. ಆದರೆ ಇವರಾರೂ ಇಂದು ಬೇಯಿಸಿದ ಆಲುಗಡ್ಡೆಯನ್ನು ನಾಳೆ ತಿನ್ನುವುದಿಲ್ಲ. ಏಕೆಂದು ಕೇಳಿದರೆ ಇಂದಿನ ಆಲುಗಡ್ಡೆ ನಾಳೆಯ ವಿಷ ಎಂಬ ಉತ್ತರ ದೊರಕುತ್ತದೆ. ಆಲುಗಡ್ಡೆ ಬೇಯಿಸುವ ಮುನ್ನ ಹಲವು ದಿನಗಳವರೆಗೆ ಕಾಪಾಡಿ ಇಡಬಹುದಾದರೂ ಒಮ್ಮೆ ಬೇಯಿಸಿ ತಣಿಸಿದ ಬಳಿಕ ಮತ್ತೊಮ್ಮೆ ಬೇಯಿಸಿದರೆ ವಿಷವಾಗಿ ಪರಿಣಮಿಸುತ್ತದೆ. ಹಾಗಾಗಿ ಆಲುಗಡ್ಡೆ ಉಪಯೋಗಿಸಿ ತಯಾರಿಸಿದ ಖಾದ್ಯಗಳನ್ನು ಅಂದೇ ಬಳಸಿ, ಮರುದಿನಕ್ಕೆ ಇಟ್ಟುಕೊಳ್ಳಬೇಡಿ. 

೨) ಕೋಳಿಮಾಂಸ
ಕೋಳಿಮಾಂಸ
ಕೋಳಿಮಾಂಸದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಪ್ರೋಟೀನ್ ಇದೆ. ಇದು ಆರೋಗ್ಯಕರ ಆಹಾರವಾಗಿದ್ದರೂ ಮರುದಿನಕ್ಕೆ ಉಳಿಸಿ ಮತ್ತೊಮ್ಮೆ ಬಿಸಿಮಾಡಿದರೆ ಈ ಪ್ರೋಟೀನ್ ನ ಕೆಲವು ಅಂಶಗಳು ವಿಷವಾಗಿ ಪರಿವರ್ತಿತವಾಗುತ್ತವೆ. ಈ ನಿಟ್ಟಿನಲ್ಲಿ ನಡೆಸಿದ ಸಂಶೋಧನೆಗಳ ಮೂಲಕ Campylobacter ಮತ್ತು
Salmonella ಎಂಬ ಹೆಸರಿನ ಎರಡು ಬ್ಯಾಕ್ಟೀರಿಯಾಗಳು ಮರುಬಿಸಿ ಮಾಡಿದ ಈ ಪ್ರೋಟೀನ್ ನಲ್ಲಿ ಕಂಡುಬಂದಿವೆ. (ಹಸಿ ಹಾಲು, ಬೇಯಿಸದ ಮಾಂಸದಲ್ಲಿಯೂ ಈ ಬ್ಯಾಕ್ಟೀರಿಯಾಗಳಿರುತ್ತವೆ). ಈ ಜೋಡಿ ಜಠರದಲ್ಲಿ ಅಜೀರ್ಣತೆ, ಆಮ್ಲೀಯತೆ ಹೆಚ್ಚಿಸುವುದು ಮೊದಲಾದ ತೊಂದರೆಗಳನ್ನು ಒಡ್ಡುತ್ತವೆ. ಅಚ್ಚರಿ ಎಂದರೆ ಇಂದಿನ ಕೋಳಿಮಾಂಸದ ಖಾದ್ಯವನ್ನು ಮರುದಿನ ಬಿಸಿಮಾಡದೇ ತಣ್ಣಗೇ ಇದ್ದಾಗ ಇರದ ಈ ಬ್ಯಾಕ್ಟೀರಿಯಾಗಳು ಬಿಸಿಮಾಡಿದಾಕ್ಷಣ ಪ್ರತ್ಯಕ್ಷವಾಗುತ್ತವೆ. ವಾತಾಪಿ ಜೀರ್ಣೋಭವ ಕಥೆ ನೆನಪಾಯಿತೇ? ಆದ್ದರಿಂದ ಅನಿವಾರ್ಯವಾದರೆ ಬಿಸಿಮಾಡದೇ ಕೋಳಿಮಾಂಸವನ್ನು ಸೇವಿಸಬಹುದು, ಆದರೆ ಬಳಸದಿರುವುದೇ ಒಳಿತು ಎಂದು ಆಹಾರತಜ್ಞರು ಅಭಿಪ್ರಾಯಪಡುತ್ತಾರೆ.

೩) ಅಣಬೆ
ಅಣಬೆ
ಅಣಬೆಗಳಲ್ಲೂ ತಿನ್ನಬಾರದ ಪ್ರಬೇಧಗಳಿವೆ. ಆದರೆ ತಿನ್ನಬಹುದಾದ ಅಣಬೆಯ ಖಾದ್ಯವನ್ನು ಸಿದ್ಧಪಡಿಸಿ ಕೂಡಲೇ ತಿಂದರೆ ಮಾತ್ರ ಕ್ಷೇಮ. ಒಮ್ಮೆ ತಣಿದರೆ ಇದರ ರಾಸಾಯನಿಕ ಸಂಯೋಜನೆಗಳೆಲ್ಲಾ ಕಲಸುಮೇಲೋಗರವಾಗಿ ವಿಷವಾಗಿ ಪರಿವರ್ತಿತವಾಗಿಬಿಡುತ್ತದೆ.

೪) ಬೀಟ್ ರೂಟ್
ಬೀಟ್‌ರೂಟ್
ಬೀಟ್ ರೂಟ್ ಪೋಷಕಾಂಶಗಳ ಆಗರವಾಗಿದ್ದರೂ ನೈಟ್ರೇಟ್ ಅಂಶವೂ ಹೆಚ್ಚಾಗಿಯೇ ಇದೆ. ಮರುಬಿಸಿ ಮಾಡಿದರೆ ಈ ನೈಟ್ರೇಟುಗಳೂ ವಿಷವಾಗಿ ಪರಿಣಮಿಸುವುದರಿಂದ ತಾಜಾ ಖಾದ್ಯವನ್ನು ಮಾತ್ರ ಸೇವಿಸುವುದು ಆರೋಗ್ಯಕರವಾಗಿದೆ.

೫) ಪಾಲಕ್ ಸೊಪ್ಪು
ಪಾಲಕ್ ಸೊಪ್ಪು
ಕಬ್ಬಿಣದ ಅಂಶ ಹೇರಳವಾಗಿರುವ ಪಾಲಕ್ ಮತ್ತು ಬಸಲೆ ಸೊಪ್ಪುಗಳ ಸಾರು ಮತ್ತು ಖಾದ್ಯಗಳನ್ನೂ ಮರುಬಿಸಿಮಾಡುವುದು ಒಳಿತಲ್ಲ. ಏಕೆಂದರೆ ಇದರಲ್ಲೂ ನೈಟ್ರೇಟುಗಳ ಅಂಶ ಹೆಚ್ಚಿದ್ದು ಬಿಸಿಮಾಡಿದಾಕ್ಷಣ ರಾಸಾಯನಿಕ ಬದಲಾವಣೆಗೆ ಒಳಗಾಗಿ ವಿಷಕಾರಿಯಾಗುತ್ತದೆ.

೬) ಮೊಟ್ಟೆಗಳು
ಮೊಟ್ಟೆಗಳು
ಮೊಟ್ಟೆಗಳನ್ನು ಬೇಯಿಸುವಾಗ ಒಳಗಣ ಹಳದಿ ಅಂಚಿನಲ್ಲಿ ಕಪ್ಪಾದಷ್ಟೂ ಹೆಚ್ಚು ವಿಷಕಾರಿಯಾಗಿದೆ ಎಂದರ್ಥ. ಹಾಗಾಗಿ ಆಹಾರತಜ್ಞರು ಮೊಟ್ಟೆಯನ್ನು ಕೇವಲ ಒಂದು ನಿಮಿಷದ ಅವಧಿಗೆ ಮಾತ್ರ ಬೇಯಿಸಲು ಸಲಹೆ ನೀಡುತ್ತಾರೆ. ಅಲ್ಲದೇ ಮೊಟ್ಟೆಯನ್ನು ಇನ್ನಾವ ರೂಪದಲ್ಲಿ ಅಡುಗೆ ಮಾಡಿದರೂ, ಅಂದರೆ ಆಮ್ಲೆಟ್, ಎಗ್ ಬುರ್ಜಿ, ಎಗ್ ಮಸಾಲಾ ಮೊದಲಾದವುಗಳನ್ನು ಬಿಸಿಯಿದ್ದಂತೆಯೇ ಸೇವಿಸಬೇಕು. ಒಮ್ಮೆ ತಣಿದ ಬಳಿಕ ಮರುಬಿಸಿ ಮಾಡಲೇಬಾರದು. ಏಕೆಂದರೆ ಮರುಬಿಸಿ ಮಾಡಿದಾಗ ಇದರಲ್ಲಿ ಹಲವು ವಿಷಕಾರಿ ವಸ್ತುಗಳು ಉತ್ಪನ್ನವಾಗಿ ಹೊಟ್ಟೆಯನ್ನು ಕೆಡಿಸುತ್ತವೆ.

೭) ಸೆಲೆರಿ ಸೊಪ್ಪು
ಸೆಲೆರಿ ಸೊಪ್ಪು
ನೋಡಲು ಕೊತ್ತಂಬರಿ ಸೊಪ್ಪಿನಂತೆಯೇ ಇರುವ ಸೆಲೆರಿ ಸೊಪ್ಪು ಸಹಾ ನೈಟ್ರೇಟುಗಳನ್ನು ಹೊಂದಿದೆ. ಸಾಮಾನ್ಯವಾಗಿ ಸೂಪ್ ಮಾಡಲು ಈ ಸೊಪ್ಪನ್ನು ಉಪಯೋಗಿಸಲಾಗುತ್ತದೆ. ಹೆಚ್ಚುವರಿ ಸೂಪ್ ಫ್ರಿಜ್ಜಿನೊಳಗಿರಿಸಿ ನಾಳೆಗಾಗಿ ಇಡುತ್ತಾರೆ. ಆದರೆ ಮರುಬಿಸಿ ಮಾಡಿದ ಸೂಪ್ ವಿಷಯುಕ್ತವಾಗಿರುವುದರಿಂದ ಇದನ್ನು ಸೇವಿಸದಿರುವುದು ಉತ್ತಮ. 

ಶನಿವಾರ, ಡಿಸೆಂಬರ್ 30, 2017

ಬಾಸ್ಮತಿ ಅಕ್ಕಿ: ನೋಡಲಿಕ್ಕೇನೋ ಮಲ್ಲಿಗೆ ಹೂವು, ಆದರೆ ಆರೋಗ್ಯಕ್ಕೆ?

ಬೋಲ್ಡ್ ಸ್ಕೈ . ಕಾಂ ತಾಣದಲ್ಲಿ ಪ್ರಕಟವಾದ ಲೇಖನ
https://kannada.boldsky.com/health/wellness/2017/is-basmati-rice-healthy-013785.html



ಕೆಲವೇ ವರ್ಷಗಳ ಹಿಂದೆ ಬಾಸ್ಮತಿ ಅಕ್ಕಿ ಎಂದರೆ ಮಧ್ಯಮವರ್ಗದವರ ಕೈಗೆ ಎಟುಕದ ಹಾಗೂ ಅತಿ ಕಡಿಮೆ ಪ್ರಮಾಣದಲ್ಲಿ, ಅತಿ ದುಬಾರಿ ಬೆಲೆಗೆ ಲಭ್ಯವಾಗುತ್ತಿದ್ದ ಅಕ್ಕಿಯಾಗಿತ್ತು. ಶ್ರೀಮಂತರು ಮಾತ್ರ ತಮ್ಮ ಪ್ರತಿಷ್ಠೆ ಹೆಚ್ಚಿಸಿಕೊಳ್ಳಲೇ ಈ ಅಕ್ಕಿಯಿಂದ ಮದುವೆ ಮೊದಲಾದ ಪ್ರಮುಖ ಸಮಾರಂಭಗಳಲ್ಲಿ ಅಡುಗೆ ಮಾಡಿಸಿ ಮೀಸೆ ತಿರುವಿಕೊಳ್ಳುತ್ತಿದ್ದರು. ಈ ಅಕ್ಕಿಯ ಗುಣವೇ ಹಾಗೆ. ಬೆಂದ ಬಳಿಕ ಉದ್ದುದ್ದನೆ, ಮಲ್ಲಿಗೆಯಂತೆ ಬೆಳ್ಳಗೆ ಹರಡಿ, ನಸು ಪರಿಮಳದಿಂದ ಊಟಮಾಡುವವರ ಹೊಟ್ಟೆಗಿಂತಲೂ ಮನವನ್ನು ತಣಿಸುತ್ತದೆ. ಬರೆಯ ಅನ್ನಕ್ಕಿಂತಲೂ ಇದರ ಪಲಾವ್ ಹಾಗೂ ವಿಶೇಷವಾಗಿ ಬಿರಿಯಾನಿ ಹಾಗೂ ಇತರ ಮಸಾಲೆಭರಿತ ಮಾಂಸಾಹಾರ ಹಾಗೂ ಸಸ್ಯಾಹಾರ ಅಡುಗೆಗಳಿಗೆ ಅತ್ಯುತ್ತಮವಾಗಿದೆ.

ಆದರೆ ಈ ಅಕ್ಕಿ ನೋಡುವುದಕ್ಕೆ ಮಾತ್ರವೇ ಉತ್ತಮವೇ ಅಥವಾ ಆರೋಗ್ಯಕರವೂ ಹೌದೇ?  ಈ ಅಕ್ಕಿಯನ್ನು ಕಡಿಮೆ ಪಾಲಿಶ್ ಮಾಡಿದ್ದರೆ ಇದರ ಬಣ್ಣ ಕಂದು ಬಣ್ಣಕ್ಕಿದ್ದು ಇದು ನಿಜವಾಗಿಯೂ ಆರೋಗ್ಯಕರ ಹೌದು. ಆದರೆ ಬಿಳಿ ಅಕ್ಕಿ? ಈ ಬಗ್ಗೆ ತಜ್ಞರನ್ನು ವಿಚಾರಿಸಿದರೆ, ಹೌದು, ಕಂದು ಅಕ್ಕಿಯಷ್ಟು ಪರಿಪೂರ್ಣವಲ್ಲದಿದ್ದರೂ ಕೊಂಚವೇ ಕಡಿಮೆಯಾಗಿ ಇದು ಆರೋಗ್ಯಕರವೇ ಹೌದು ಎಂದು ತಿಳಿಸುತ್ತಾರೆ. ಈ ಅಕ್ಕಿಯಲ್ಲಿ ಉತ್ತಮ ಪ್ರಮಾಣದ ಕಾರ್ಬೋಹೈಡ್ರೇಟುಗಳೂ, ಕಡಿಮೆ ಪ್ರಮಾಣದ ಪ್ರೋಟೀನ್, ಅತಿ ಕಡಿಮೆ ಕೊಬ್ಬು , ಉತ್ತಮ ಪ್ರಮಾಣದ ವಿಟಮಿನ್, ಖನಿಜಗಳು ಮತ್ತು ಅಗತ್ಯ ಪ್ರಮಾಣದ ಕರಗುವ ನಾರು ಇದ್ದು ಆರೋಗ್ಯಕ್ಕೆ ಪೂರಕವಾಗಿದೆ. ಬನ್ನಿ ಈ ಅಕ್ಕಿಯ ಸೇವನೆಯಿಂದ ಲಭ್ಯವಾಗುವ ಪ್ರಯೋಜನಗಳನ್ನು ನೋಡೋಣ:
ಪ್ರಯೋಜನ #1

ಪ್ರಯೋಜನ #1
ನಮ್ಮ ಆಹಾರದಲ್ಲಿ ಸಾಕಷ್ಟು ನಾರು ಇದ್ದರೆ ಕರುಳುಗಳ ಮೇಲೆ ಭಾರ ಬೀಳುವುದು ತಪ್ಪುತ್ತದೆ ಹಾಗೂ ತನ್ಮೂಲಕ ಕರುಳಿನ ಕ್ಯಾನ್ಸರ್ ಬರುವ ಸಾಧ್ಯತೆ ಕಡಿಮೆಯಾಗುತ್ತದೆ. ಬಾಸ್ಮತಿ ಅಕ್ಕಿಯಲ್ಲಿ ಇತರ ಅಕ್ಕಿಯಲ್ಲಿರುವುದಕ್ಕಿಂತ ಕೊಂಚ ಹೆಚ್ಚೇ ಕರಗುವ ನಾರು ಇರುತ್ತದೆ. ಕಂದು ಬಾಸ್ಮತಿಯಲ್ಲಿ ಇನ್ನೂ ಹೆಚ್ಚಿರುತ್ತದೆ. ಆದ್ದರಿಂದ ಲಭ್ಯವಿದ್ದರೆ ಕಂದು ಅಕ್ಕಿಯನ್ನೇ ಕೊಳ್ಳುವುದು ಉತ್ತಮ. ಒಂದು ಸಂಶೋಧನೆಯ ಪ್ರಕಾರ ಪ್ರತಿದಿನ ಸುಮಾರು ಮೂವತ್ತು ಗ್ರಾಂ ಕರಗುವ ನಾರನ್ನು ಆಹಾರದ ಮೂಲಕ ಸೇವಿಸುವ ವ್ಯಕ್ತಿಗಳಲ್ಲಿ ಕರುಳಿನ ಕ್ಯಾನ್ಸರ್ ಬರುವ ಸಾಧ್ಯತೆ ಇತರರಿಗಿಂತ 30% ಕಡಿಮೆ ಇರುತ್ತದೆ ಎಂದು ಕಂಡುಕೊಳ್ಳಲಾಗಿದೆ.
ಪ್ರಯೋಜನ #2
ಪ್ರಯೋಜನ #2
ಕೆಲವು ಆಹಾರಗಳನ್ನು ಸೇವಿಸಿದ ತಕ್ಷಣವೇ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಧಿಡೀರನೇ ಏರುತ್ತದೆ. ಈ ಪ್ರಮಾಣವನ್ನು ಗೈಸೆಮಿಕ್ ಇಂಡೆಕ್ಸ್ ಎಂಬ ಕೋಷ್ಟಕದಲ್ಲಿ ಗಮನಿಸಬಹುದು. ಈ ಮಾಪಕ ಕಡಿಮೆ ಇದ್ದಷ್ಟೂ ರಕ್ತದಲ್ಲಿ ಸಕ್ಕರೆ ಸೇರುವ ಪ್ರಮಾಣ ನಿಧಾನವಾಗುತ್ತಾ ಹೋಗುತ್ತದೆ. ಬಾಸ್ಮತಿ ಅಕ್ಕಿಯಲ್ಲಿ ಅತಿ ಕಡಿಮೆ ಮಾಪನ ಇರುವ ಕಾರಣ ಈ ಅಕ್ಕಿಯನ್ನು ಮಧುಮೇಹಿಗಳೂ ಸುರಕ್ಷಿತವಾಗಿ ಸೇವಿಸಬಹುದು. ಆದರೆ ಯಾವುದಕ್ಕೂ ನಿಮ್ಮ ವೈದ್ಯರ ಸಲಹೆ ಪಡೆದೇ ಸೇವಿಸುವುದು ಉತ್ತಮ.
ಮಧುಮೇಹಿಗಳೂ ಸುರಕ್ಷಿತವಾಗಿ ಸೇವಿಸಬಹುದು
ಪ್ರಯೋಜನ #3
ಬಾಸ್ಮತಿ ಅಕ್ಕಿಯನ್ನು ಜೀರ್ಣೀಸಿಕೊಳ್ಳಲು ಇತರ ಅಕ್ಕಿಗಿಂತಲೂ ನಮ್ಮ ಜೀರ್ಣಾಂಗಗಳಿಗೆ ಹೆಚ್ಚಿನ ಹೊತ್ತಿನ ಅಗತ್ಯವಿದೆ. ಇದರಿಂದ ಹೆಚ್ಚು ಹೊತ್ತು ಹೊಟ್ಟೆ ತುಂಬಿರುವಂತೆ ಅನ್ನಿಸುತ್ತದೆ ಹಾಗೂ ಹೆಚ್ಚು ಹೊತ್ತಿನ ಕಾಲ ಹಸಿವನ್ನು ತಡೆದುಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ನಡುನಡವೆ ತಿನ್ನುತ್ತಾ ಇರುವ ಬಯಕೆಯನ್ನು ಹತ್ತಿಕ್ಕಲು ಸಾಮಾನ್ಯ ಅಕ್ಕಿಯ ಬದಲು ಬಾಸ್ಮತಿ ಬಳಸುವುದು ಉತ್ತಮ.
ಪ್ರಯೋಜನ #3
ಪ್ರಯೋಜನ #4
ಇದರಲ್ಲಿ ಹೆಚ್ಚಿನ ಕರಗುವ ನಾರು ಇರುವ ಕಾರಣ ಮಲಬದ್ದತೆಯಾಗುವ ಸಾಧ್ಯತೆ ಅತಿ ಕಡಿಮೆ. ಹಾಗಾಗಿ ಮರುದಿನದ ನಿಸರ್ಗದ ಕರೆಯನ್ನು ಸುಲಭವಾಗಿ ಪೂರೈಸಿಕೊಳ್ಳಬಹುದು.
ಪ್ರಯೋಜನ #4
ಪ್ರಯೋಜನ #5
ಈ ಅಕ್ಕಿಯಲ್ಲಿ ಕೊಲೆಸ್ಟ್ರಾಲ್ ಇಲ್ಲವೇ ಇಲ್ಲ. ಅಲ್ಲದೇ ಕೊಬ್ಬು ಸಹಾ ಅತಿ ಕಡಿಮೆ ಇದೆ. ಅಲ್ಲದೇ ಗೋಧಿಯಂತೆ ಇದರಲ್ಲಿ ಗ್ಲುಟೆನ್ ಸಹಾ ಇಲ್ಲ. ಹಾಗಾಗಿ ಗ್ಲುಟೆನ್ ಒಲ್ಲದ ವ್ಯಕ್ತಿಗಳಿಗೂ, ತೂಕ ಕಡಿಮೆಮಾಡಿಕೊಳ್ಳಲು ಬಯಸುವ ವ್ಯಕ್ತಿಗಗಳಿಗೂ ಈ ಅಕ್ಕಿ ಉತ್ತಮವಾಗಿದೆ.
ಪ್ರಯೋಜನ #5
ಪ್ರಯೋಜನ #6
ಇದರಲ್ಲಿರುವ ಥಯಾಮಿನ್ ಮತ್ತು ನಿಯಾಸಿನ್ ಎಂಬ ವಿಟಮಿನ್ನುಗಳು ಜೀರ್ಣಕ್ರಿಯೆಯನ್ನು ಇನ್ನಷ್ಟು ಉತ್ತಮಗೊಳಿಸುತ್ತವೆ ಹಾಗೂ ನರವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುತ್ತದೆ ಹಾಗೂ ಹೃದಯಕ್ಕೂ ಉತ್ತಮವಾಗಿದೆ. ಇದರಲ್ಲಿರುವ ಕಬ್ಬಿಣದ ಅಂಶ ರಕ್ತ ಹೀನತೆಯನ್ನು ಕಡಿಮೆಗೊಳಿಸುತ್ತದೆ.
ಪ್ರಯೋಜನ #6

ಸೋಮವಾರ, ಡಿಸೆಂಬರ್ 25, 2017

ಹಾಗಲಕಾಯಿಯ ಸೇವನೆಯಿಂದ ರಕ್ತದೊತ್ತಡ ಕಡಿಮೆಯಾಗುತ್ತದೆಯೇ?

ಬೋಲ್ಡ್ ಸ್ಕೈ.ಕಾಂ ತಾಣದಲ್ಲಿ ಪ್ರಕಟವಾದ ಲೇಖನ
https://goo.gl/xKfuk2

ಕಹಿ ಎಂಬ ಒಂದೇ ಕಾರಣದಿಂದ ನಮ್ಮಲ್ಲಿ ಹೆಚ್ಚಿನವರು ಹಾಗಲಕಾಯಿ ಎಂಬ ಅದ್ಭುತ ಆಹಾರವನ್ನು ಮನೆಗೇ ತರುವುದಿಲ್ಲ. ವಾಸ್ತವವಾಗಿ ನಿಯಮಿತವಾಗಿ ಹಾಗಲಕಾಯಿಯನ್ನು ಸೇವಿಸುತ್ತಾ ಬರುವ ಮೂಲಕ ರಕ್ತ ಪರಿಶುದ್ಧಗೊಳ್ಳುತ್ತದೆ ಹಾಗೂ ಈ ಮೂಲಕ ಹಲವಾರು ತೊಂದರೆಗಳು ಇಲ್ಲವಾಗುತ್ತವೆ. ವಿಶೇಷವಾಗಿ ಟೈಪ್ ೧ ಮಧುಮೇಹವನ್ನು ಸಮರ್ಥವಾಗಿ ನಿವಾರಿಸುವ ಹಾಗಲಕಾಯಿಯಲ್ಲಿ ಉತ್ತಮ ಪ್ರಮಾಣದ ಕರಗದ ನಾರು ಇದ್ದು ಮಲಬದ್ದತೆಯಿಂದಲೂ ಪರಿಹಾರ ಒದಗಿಸುತ್ತದೆ.
ಹಾಗಲಕಾಯಿಯಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆಯೇ?

ಮದ್ಯಪಾನದ ಬಳಿಕ ಎದುರಾಗುವ ತಲೆತಿರುಗುವ ಸ್ಥಿತಿಯನ್ನು ಸರಿಪಡಿಸಲು ಹಾಗಲಕಾಯಿಯ ಜ್ಯೂಸ್ ಕುಡಿದರೆ ಸಾಕು. ಅಲ್ಲದೇ ಹಾಗಲಕಾಯಿ ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ. ಆದರೆ ಇದರಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆಯೇ? ಹೌದು! ಇಂದಿಗೂ ಭಾರತದ ಹೆಚ್ಚಿನ ರಾಜ್ಯಗಳಲ್ಲಿ ಹಾಗಲಕಾಯಿಯನ್ನು ನಿಯಮಿತವಾಗಿ ಸೇವಿಸುತ್ತಾ ಬರಲಾಗಿದ್ದು ಈ ಅಭ್ಯಾಸದ ಆಹಾರ ಸೇವಿಸುವವರಲ್ಲಿ ರಕ್ತದ ಒತ್ತಡ ಹಾಗೂ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಸಂತುಲಿತವಾಗಿರುತ್ತದೆ. ಬನ್ನಿ, ಇಂದಿಗೂ ಮಧುಮೇಹಕ್ಕೆ ಔಷಧಿಯಾಗಿ ಹಾಗಲಕಾಯಿಯನ್ನು ಏಕೆ ಬಳಸುತ್ತಾರೆ ಎಂಬ ಕುತೂಹಲಕ್ಕೆ ಹಾಗಲಕಾಯಿಯ ಮಾಹಿತಿಗಳು ಉತ್ತರ ನೀಡಲಿವೆ:


ಹಾಗಲಕಾಯಿಯಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆಯೇ?
ಕೆಲವಾರು ಸಂಶೋಧನೆಗಳಲ್ಲಿ ಕಂಡುಕೊಂಡಂತೆ ನಮ್ಮ ರಕ್ತದ ಒತ್ತಡಕ್ಕೆ alpha glucosidase ಎಂಬ ಕಿಣ್ವದ ಚಟುವಟಿಕೆ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ಅಧಿಕ ರಕ್ತದೊತ್ತಡವನ್ನೂ ಕಡಿಮೆ ಮಾಡುತ್ತದೆ.  ವಿಶೇಷವಾಗಿ ಊಟದ ಬಳಿಕ ರಕ್ತದಲ್ಲಿ ಥಟ್ಟನೇ ಏರುವ ಸಕ್ಕರೆಯ ಪ್ರಮಾಣವನ್ನು ನಿಯಂತ್ರಿಸುತ್ತದೆ.
ಈ ಜ್ಯೂಸ್‌ನಲ್ಲಿ ಏನೇನಿದೆ?
ಇದಕ್ಕೆ ಹಾಗಲಕಾಯಿಯನ್ನು ಹೇಗೆ ಬಳಸಬೇಕು?
ಒಂದು ಹಾಗಲಕಾಯಿಯ ಬೀಜ ನಿವಾರಿಸಿ ತಿರುಗಳನ್ನು ಮಿಕ್ಸಿಯಲ್ಲಿ ಕಡೆದು ಜ್ಯೂಸ್ ತಯಾರಿಸಿ. ಈ ಜ್ಯೂಸ್ ಅನ್ನು ಪ್ರತಿದಿನ ಬೆಳಗ್ಗಿನ ಪ್ರಥಮ ಆಹಾರವಾಗಿ ಸೇವಿಸಿ. ಇದರಿಂದ ರಕ್ತದ ಒತ್ತಡ ನಿಯಂತ್ರಣಕ್ಕೆ ಬರುತ್ತದೆ.
ಹಾಗಲಕಾಯಿ ಟೀ ಪ್ರಯತ್ನಿಸಿ
ಈ ಜ್ಯೂಸ್ ನಲ್ಲಿ ಏನೇನಿದೆ?
ಹಾಗಲಕಾಯಿಯಲ್ಲಿ ಕೆಲವಾರು ಪೋಷಕಾಂಶಗಳಿವೆ. ಪ್ರಮುಖವಾಗಿ ಕ್ಯಾರಾಟಿನ್ ಮತ್ತು ಮೋಮೋರ್ಸಿಡಿನ್ ಎಂಬ ಪೋಷಕಾಂಶಗಳು ರಕ್ತದಲ್ಲಿರುವ ಹೆಚ್ಚಿನ ಸಕ್ಕರೆಯನ್ನು ನಿಯಂತ್ರಿಸುವ ಗುಣ ಹೊಂದಿವೆ. ವಿಶೇಷವಾಗಿ ಮಧುಮೇಹಿಗಳ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣವನ್ನು ನಿಯಂತ್ರಿಸುವ ಮೂಲಕ ರಕ್ತದಲ್ಲಿ ಸೂಕ್ತ ಪ್ರಮಾಣದ ಸಕ್ಕರೆ ಇರುವಂತೆ ನೋಡಿಕೊಳ್ಳುತ್ತವೆ.
ಇದಕ್ಕೆ ಹಾಗಲಕಾಯಿಯನ್ನು ಹೇಗೆ ಬಳಸಬೇಕು?

ಹಾಗಲಕಾಯಿ ಟೀ ಪ್ರಯತ್ನಿಸಿ:
ಕೆಲವು ಅಂಗಡಿಗಳಲ್ಲಿ ಒಣಗಿಸಿದ ಹಾಗಲಕಾಯಿ ಸಿಗುತ್ತದೆ. ಸಮಯ ಸಿಕ್ಕಿದರೆ ನೀವೂ ಒಣಗಿಸಿಕೊಳ್ಳಬಹುದು. ಒಣಗಿಸಿದ ಹಾಗಲಕಾಯಿಯ ತುಂಡೊಂದನ್ನು ಕುದಿಸಿ ಸೋಸಿ ತಯಾರಿಸಿದ ಟೀ ಅನ್ನು ದಿನಕ್ಕೆ ಎರಡು ಬಾರಿ ಕುಡಿಯುವ ಮೂಲಕವೂ ಉತ್ತಮ ಪರಿಣಾಮ ಪಡೆಯಬಹುದು.
ಇದರ ಬೀಜಗಳು ಯಾವ ಉಪಯೋಗಕ್ಕೆ ಬರುತ್ತವೆ?

ಇದರ ಬೀಜಗಳು ಯಾವ ಉಪಯೋಗಕ್ಕೆ ಬರುತ್ತವೆ?
ಹಾಗಲಕಾಯಿಯಲ್ಲಿರುವ ಬೀಜಗಳಲ್ಲಿ ಪಾಲಿಪೆಪ್ಟೈಡ್ - ಪಿ ಎಂಬ ಪೋಷಕಾಂಶವಿದ್ದು ಇದು ಮಧುಮೇಹಿಗಳಿಗೆ ಇಂಜೆಕ್ಷನ್ ಮೂಲಕ ನೀಡಲಾಗುವ ಇನ್ಸುಲಿನ್ ನಂತೆಯೇ ಕೆಲಸ ಮಾಡುತ್ತವೆ. ಇವು ರಕ್ತದಲ್ಲಿ ಸಕ್ಕರೆಯ ಅಂಶವನ್ನು ಇಳಿಸಲು ನೆರವಾಗುತ್ತವೆ.

ಹಾಗಲಕಾಯಿಯ ಹೊಸರುಚಿಗಳನ್ನು ಪ್ರಯತ್ನಿಸಿ
ಭಾರತೀಯ ಅಡುಗೆಗಳಲ್ಲಿ ನೂರಾರು ಬಗೆಯ ಖಾದ್ಯಗಳಿದ್ದು ಹೆಚ್ಚಿನವುಗಳಲ್ಲಿ ಕಹಿಯನ್ನು ಕಡಿಮೆ ಮಾಡಲು ಕೆಲವು ವಿಧಾನಗಳನ್ನು ಅನುಸರಿಸಲಾಗಿರುತ್ತದೆ. ಖಾರವನ್ನು ಹೆಚ್ಚಿಸಿ ಅಥವಾ ಉಪ್ಪುನೀರಿನಲ್ಲಿ ಮೊದಲು ಹಾಗಲಕಾಯಿಯನ್ನು ಬೇಯಿಸಿ ಹಿಂಡಿ ತೆಗೆದ ಬಳಿಕ ಅಡುಗೆ ಮಾಡಿ ಬಡಿಸಿದರೆ ಕಹಿ ಇರುವುದಿಲ್ಲ. ಯಾವುದೇ ಖಾದ್ಯವಾಗಲಿ, ವಾರಕ್ಕೆರಡು ಅಥವಾ ನಾಲ್ಕು ಬಾರಿ ಸೇವಿಸಿದರೆ ಸಾಕು.
ಹಾಗಲಕಾಯಿಯ ಹೊಸರುಚಿಗಳನ್ನು ಪ್ರಯತ್ನಿಸಿ
ಇದರ ಕಹಿ ಇಷ್ಟವಾಗದಿದ್ದರೆ ಏನು ಮಾಡುವಿರಿ?
ಹೆಚ್ಚಿನವರಿಗೆ ಇದರ ಕಹಿ ರುಚಿ ಇಷ್ಟವಾಗುವುದೇ ಇಲ್ಲ. ಇದು ನಿಮಗೆ ಔಷಧಿ, ಸೇವಿಸಲೇಬೇಕು ಎಂದು ಕಟ್ಟಪ್ಪಣೆ ಮಾಡಿದರೂ ಸೇವಿಸಲು ಮನಸ್ಸೇ ಬಾರದೇ ಇದ್ದರೆ ವೈದ್ಯರನ್ನು ಭೇಟಿಯಾಗಿ ಹಾಗಲಕಾಯಿಯ ಅಂಶ ಹೆಚ್ಚಿರುವ ಔಷಧಿಗಳನ್ನು ಸೇವಿಸಲು ಸಲಹೆ ಪಡೆದುಕೊಳ್ಳಿ. ನಿಮ್ಮ ದೇಹ ದಾರ್ಢ್ಯತೆ ಹಾಗೂ ಇತರ ಆರೋಗ್ಯ ಮಾಹಿತಿಯನ್ನು ಪರಿಶೀಲಿಸಿ ಸೂಕ್ತ ಪ್ರಮಾಣದಲ್ಲಿ ಹಾಗಲಕಾಯಿಯ ಅಂಶವಿರುವ ಮಾತ್ರೆಗಳನ್ನು ಸೇವಿಸಲು ವೈದ್ಯರು ಶಿಫಾರಸ್ಸು ಮಾಡುತ್ತಾರೆ. ಇದನ್ನು ಸರಿಯಾದ ಕ್ರಮದಲ್ಲಿ ಅನುಸರಿಸಿ.
ಇದರ ಕಹಿ ಇಷ್ಟವಾಗದಿದ್ದರೆ ಏನು ಮಾಡುವಿರಿ?



ಶುಕ್ರವಾರ, ಡಿಸೆಂಬರ್ 22, 2017

ಎಡಮಗ್ಗುಲಲ್ಲಿ ಮಲಗುವ ಆರೋಗ್ಯಕರ ಮಹತ್ವಗಳು


ನಿಮ್ಮ ಆರೋಗ್ಯ ನಿಮ್ಮ ಮಲಗುವ ಭಂಗಿಯನ್ನೂ ಅನುಸರಿಸಿದೆ ಎಂದರೆ ಆಶ್ಚರ್ಯವಾಗಬಹುದು. ನಿಮ್ಮ ಮಲಗುವ ಭಂಗಿ ನಿಮ್ಮ ಆರೋಗ್ಯವನ್ನು ವೃದ್ದಿಸಬಹುದು ಅಥವಾ ಕೆಡಿಸಬಹುದು. ನಿಮಗೆ ಯಾವ ಭಂಗಿಯಲ್ಲಿ ಮಲಗಿದರೆ ಸುಖಕರ ಎನ್ನಿಸುತ್ತದೆಯೋ ಆ ಭಂಗಿಯಲ್ಲಿಯೇ ಮಲಗಲು ಮನಸ್ಸು ತುಡಿಯುವುದು ಸಹಜ. ಆದರೆ ಎಡಮಗ್ಗುಲಲ್ಲಿ ಮಲಗುವ ಮೂಲಕ ಅತಿ ಹೆಚ್ಚಿನ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಇದರಿಂದ ಹಲವರು ಕಾಯಿಲೆಗಳು ಬರುವುದರಿಂದ ತಡೆಯಬಹುದು ಹಾಗೂ ಹೃದಯ, ಜೀರ್ಣಕ್ರಿಯೆ ಮೊದಲಾದವುಗಳ ಕ್ಷಮತೆ ಹೆಚ್ಚುತ್ತದೆ. ಬೇಗನೇ ಸುಸ್ತಾಗುವುದರಿಂದ ತಡೆಯುತ್ತದೆ, ಕರುಳುಗಳಲ್ಲಿ ಆಹಾರದ ಚಲನೆ ಸುಗಮವಾಗುತ್ತದೆ ಹಾಗೂ ಇನ್ನೂ ಕೆಲವಾರು ಪ್ರಯೋಜನಗಳಿವೆ. ಈ ಪ್ರಯೋಜನಗಳನ್ನು ಪಡೆಯಲು ನಮಗೆ ಇದುವರೆಗೆ ಅಪರಿಚಿತವಾಗಿದ್ದ ಈ ಭಂಗಿಯಲ್ಲಿ ಮಲಗುವುದನ್ನು ರೂಢಿಸಿಕೊಳ್ಳಬೇಕು. ಪ್ರಾರಂಭದ ಕೆಲದಿನ ಕೊಂಚ ತ್ರಾಸ ಎನಿಸಬಹುದು, ಆದರೆ ದಿನಗಳೆದಂತೆ ಇದು ಅಭ್ಯಾಸವಾಗಿ ಆರೋಗ್ಯ ವೃದ್ದಿಸುತ್ತದೆ.
ಪ್ರಾಣಾಂತಿಕ ಕಾಯಿಲೆಗಳಿಂದ ರಕ್ಷಿಸುತ್ತದೆ
ಈ ಲೇಖನವನ್ನು ಓದಿದ ಬಳಿಕ ಎಡಮಗ್ಗುಲಲ್ಲಿ ಮಲಗಿಕೊಳ್ಳುವ ಮಹತ್ವದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಮೂಲಕ ಇಂದಿನಿಂದಲೇ ಈ ಬಗ್ಗೆ ಮನಸ್ಸು ಮಾಡುವುದು ಖಂಡಿತಾ. ತದ್ವಿರುದ್ದವಾಗಿ ಬಲಮಗ್ಗುಲಲ್ಲಿ ಮಲಗಿಕೊಂಡರೆ ಇದು ವ್ಯತಿರಿಕ್ತವಾದ ಪರಿಣಾಮವನ್ನೇ ನೀಡುತ್ತದೆ. ಮುಖ್ಯವಾದ ತೊಂದರೆ ಎಂದರೆ  ಪ್ರಾತಃವಿಧಿಯ ಮೂಲಕ ಹೊರಹೋಗಬೇಕಾಗಿದ್ದ ಕಲ್ಮಶ ಹೊರಹೋಗದೇ ದೇಹದಲ್ಲಿಯೇ ಉಳಿದುಕೊಳ್ಳುತ್ತದೆ ಅಥವಾ ಪೂರ್ಣಪ್ರಮಾಣದಲ್ಲಿ ವಿಸರ್ಜನೆಯಾಗುವುದಿಲ್ಲ. ಹೃದಯದ ಮೇಲಿನ ಒತ್ತಡವೂ ಹೆಚ್ಚುತ್ತದೆ ಹಾಗೂ ಜೀರ್ಣಕ್ರಿಯೆಯನ್ನೂ ಕಷ್ಟವಾಗಿಸುತ್ತದೆ. ಬೆನ್ನಿನ ಮೇಲೆ ಮಲಗುವ ಮೂಲಕ ಉಸಿರಾಟ ಕಷ್ಟಕರವಾಗುತ್ತದೆ ಹಾಗೂ ವಿಶೇಷವಾಗಿ ತಡೆತಡೆದು ನಿದ್ದೆ ಆವರಿಸುವ ತೊಂದರೆ ಇರುವವರಿಗೆ ಹಾಗೂ ಅಸ್ತಮಾ ರೋಗಿಗಳಿಗೆ ಇದು ಹೆಚ್ಚು ಕಷ್ಟಕರವಾಗುತ್ತದೆ. ಆದ್ದರಿಂದ ಆರೋಗ್ಯ ವೃದ್ದಿಸಬೇಕೆಂದರೆ ಎಡಮಗ್ಗುಲಲ್ಲಿಯೇ ಮಲಗುವುದು ಉತ್ತಮ ಹಾಗೂ ಇದುವರೆಗೆ ಈ ಅಭ್ಯಾಸವಿಲ್ಲದಿದ್ದರೆ ಈಗಲಾದರೂ ರೂಢಿಸಿಕೊಳ್ಳಲು ಪ್ರಾರಂಭಿಸುವುದು ಸೂಕ್ತ.  ಬನ್ನಿ ಹೀಗೆ ಮಲಗುವ ಮೂಲಕ ಪಡೆಯಬಹುದಾದ ಪ್ರಯೋಜನಗಳನ್ನು ಅರಿಯೋಣ:

ಪ್ರಾಣಾಂತಿಕ ಖಾಯಿಲೆಗಳಿಂದ ರಕ್ಷಿಸುತ್ತದೆ:
ಯಕೃತ್ ಹಾಗೂ ಮೂತ್ರಪಿಂಡಗಳ ಕ್ಷಮತೆ ಹೆಚ್ಚುತ್ತದೆ
ಎಡಮಗ್ಗುಲಲ್ಲಿ ಮಲಗುವ ಮೂಲಕ ದುಗ್ಧರಸಗಳು ಹೆಚ್ಚಿನ ಪ್ರಮಾಣದಲ್ಲಿ ಸ್ರವಿಸಿ ದೇಹದಿಂದ ಕಲ್ಮಶಗಳನ್ನು ಪೂರ್ಣವಾಗಿ ಹೊರಹಾಕಲು ನೆರವಾಗುತ್ತವೆ. ಕಲ್ಮಶಗಳು ಒಳಗೇ ಉಳಿದುಕೊಂಡರೆ ಇದರ ವಿಷಕಾರಿ ಅಂಶಗಳು ಹಲವಾರು ಬಗೆಯಲ್ಲಿ ಆರೋಗ್ಯವನ್ನು ಕೆಡಿಸಬಹುದು ಹಾಗೂ ಸತತವಾದ ಅಭ್ಯಾಸದಿಂದ ಕಾಯಿಲೆ ಉಲ್ಬಣಗೊಂಡು ಪ್ರಾಣಾಂತಿಕ ಮಟ್ಟಕ್ಕೇರಬಹುದು. ಎಡಮಗ್ಗುಲಲ್ಲಿ ಮಲಗುವ ಮೂಲಕ ದುಗ್ಧರಸಗಳು ಪೂರ್ಣಪ್ರಮಾಣದಲ್ಲಿ ಸ್ರವಿಸುತ್ತವೆ ಹಾಗೂ ಇಡಿಯ ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ. ಇದಕ್ಕೆ ಕಾರಣ ನಮ್ಮ ದುಗ್ದರಸ ಪ್ರಸಾರಣಾ ವ್ಯವಸ್ಥೆ ಎಡಭಾಗದಲ್ಲಿ ಹೆಚ್ಚು ಪ್ರಬಲವಾಗಿರುವುದು. ಬಲಭಾಗದ ವ್ಯವಸ್ಥೆ ಕೊಂಚ ನಿಧಾನ ಹಾಗೂ ಬಲಮಗ್ಗುಲಲ್ಲಿ ಮಲಗುವ ಮೂಲಕ ಈ ವ್ಯವಸ್ಥೆ ಹೆಚ್ಚು ಒತ್ತಡಕ್ಕೆ ಒಳಗಾಗುವ ಮೂಲಕ ನಿದ್ದೆಯ ಸಮಯದಲ್ಲಿ ನಡೆಯಬೇಕಾಗಿದ್ದ ಕಲ್ಮಶ ನಿವಾರಣೆ ಪರಿಪೂರ್ಣವಾಗದೇ ಹೋಗುತ್ತದೆ.

ಯಕೃತ್ ಹಾಗೂ ಮೂತ್ರಪಿಂಡಗಳ ಕ್ಷಮತೆ ಹೆಚ್ಚುತ್ತದೆ.
ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ
ಈ ಅಂಗಗಳು ನಮ್ಮ ದೇಹದ ಶೋಧನಾ ಕಾರ್ಯವನ್ನು ನಡೆಸುವ ಪ್ರಮುಖ ಅಂಗಗಳಾಗಿದ್ದು ವಿಶೇಷವಾಗಿ ರಾತ್ರಿಯ ಸಮಯದಲ್ಲಿ ಅನೈಚ್ಛಿಕವಾಗಿ ಹೆಚ್ಚಿನ ಕಾರ್ಯವನ್ನು ನಡೆಸುತ್ತವೆ. ಎಡಮಗ್ಗುಲಲ್ಲಿ ಮಲಗುಅವ್ ಮೂಲಕ ಈ ಅಂಗಗಳು ತಮ್ಮ ಶೋಧನಾ ಕಾರ್ಯವನ್ನು ಪೂರ್ಣಕ್ಷಮತೆಯಿಂದ ನಡೆಸಲು ಸಾಧ್ಯವಾಗುತ್ತದೆ ಹಾಗೂ ಕಲ್ಮಶಗಳನ್ನು ಪೂರ್ಣವಾಗಿ ಹೊರಹಾಕಲು ಸಾಧ್ಯವಾಗುತ್ತದೆ.

ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ
ಜೀರ್ಣಗೊಂಡ ಆಹಾರದ ಚಲನೆ ಸುಲಭವಾಗುತ್ತದೆ
ಎಡಮಗ್ಗುಲಲ್ಲಿ ಮಲಗುವ ಮೂಲಕ ಜಠರ ಹಾಗೂ ಮೇದೋಜೀರಕ ಗ್ರಂಥಿಗಳು ಯಾವುದೇ ಭಾರವಿಲ್ಲದೇ ನೈಸರ್ಗಿಕವಾಗಿ ತಮ್ಮ ಸ್ವಸ್ಥಾನದಲ್ಲಿ ಜೋತುಬೀಳಲು ನೆರವಾಗುತ್ತದೆ. ಇದರಿಂದ ಆಹಾರವನ್ನು ಪೂರ್ಣವಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತದೆ. ಮೇದೋಜೀರಕ ಗ್ರಂಥಿಯಿಂದ ಸ್ರವಿಸಿದ ಜೀರ್ಣರಸಗಳು ಅಗತ್ಯವಿದ್ದಾಗ ಪೂರ್ಣಪ್ರಮಾಣದಲ್ಲಿ ಸ್ರವಿಸಲು ನೆರವಾಗುತ್ತದೆ ಹಾಗೂ ಜೀರ್ಣಕ್ರಿಯೆ ಪರಿಪೂರ್ಣಗೊಳ್ಳಲು ಸಾಧ್ಯವಾಗುತ್ತದೆ. ಜೀರ್ಣಗೊಂಡ ಆಹಾರ ಜಠರದಿಂದ ಗುರುತ್ವದ ನೆರವಿನಿಂದ ಸುಲಭವಾಗಿ ಸಣ್ಣಕರುಳಿಗೆ ವರ್ಗಾವಣೆಯಾಗಲು ಸಾಧ್ಯವಾಗುತ್ತದೆ. ಇದರಿಂದಾಗಿ ಹೊಟ್ಟೆಯ ಸ್ನಾಯುಗಳ ಮೇಲೆ ಹೆಚ್ಚಿನ ಒತ್ತಡ ಬೀಳದೇ ಜೀರ್ಣಕ್ರಿಯೆ ಸುಲಭಗೊಳ್ಳಲು ಸಾಧ್ಯವಾಗುತ್ತದೆ.

ಜೀರ್ಣಗೊಂಡ ಆಹಾರದ ಚಲನೆ ಸುಲಭವಾಗುತ್ತದೆ.

ಎಡಮಗ್ಗುಲಲ್ಲಿ ಮಲಗಿದ್ದಾಗ ನಮ್ಮ ಜಠರ ಹಾಗೂ ಕರುಳುಗಳು ಕೆಳಮುಖವಾಗಿರುವ ಕಾರಣ ಜೀರ್ಣಗೊಂಡ ಆಹಾರ ಈ ಅಂಗಗಳ ಮೂಲಕ ಹಾದುಹೋಗಲು ಗುರುತ್ವದ ನೆರವು ಪಡೆದು ಸುಲಭವಾಗಿ ಸಾಗುತ್ತವೆ. ಅಲ್ಲದೇ ಜೀರ್ಣಕ್ರಿಯೆ ಸುಲಭವಾದ ಕಾರಣ ದೊಡ್ಡಕರುಳಿನಿಂದ ರಾತ್ರಿ ಹೊತ್ತು ನೀರನ್ನು ಸೆಳೆದು ಕಲ್ಮಶವನ್ನು ಮರುದಿನ ಬೆಳಿಗ್ಗೆ ಮಲವಿಸರ್ಜನೆ ಸುಲಭವಾಗಿ ಹಾಗೂ ಪೂರ್ಣಪ್ರಮಾಣದ ಕಲ್ಮಶ ಹೊರಹೋಗಲು ಸಾಧ್ಯವಾಗುತ್ತದೆ.

ಹೃದಯದ ಕ್ಷಮತೆ ಹೆಚ್ಚುತ್ತದೆ
ಹೃದಯದ ಕ್ಷಮತೆ ಹೆಚ್ಚುತ್ತದೆ
ಎಡಮಗ್ಗುಲಲ್ಲಿ ಮಲಗುವ ಮೂಲಕ ಹೃದಯದ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಹೇಗೆಂದರೆ ಹೀಗೆ ಮಲಗುವ ಮೂಲಕ ರಕ್ತನಾಳಗಳಲ್ಲಿ ಗುರುತ್ವದ ಸಹಾಯದಿಂದ ರಕ್ತವನ್ನು ದೂಡಿಕೊಡಲು ಹೃದಯಕ್ಕೆ ಕೊಂಚವೇ ಒತ್ತಡದಿಂದ ದೂಡಿಕೊಟ್ಟರೆ ಸಾಕಾಗುತ್ತದೆ. ಅಲ್ಲದೇ ಹೃದಯಕ್ಕೆ ಆಗಮಿಸುವ ರಕ್ತವನ್ನು ಸಾಗಿಸುವ ನರ (inferior vena cava) ದ ಮೂಲಕ ಕಡಿಮೆ ರಕ್ತ ಆಗಮಿಸುವ ಮೂಲಕವೂ ಹೃದಯಕ್ಕೆ ಹೆಚ್ಚಿನ ಶ್ರಮ ಬೇಕಾಗದೇ ಇದರ ಕ್ಷಮತೆಯೂ ಹೆಚ್ಚುತ್ತದೆ. 

ಆಮ್ಲೀಯತೆ  ಹಾಗೂ ಎದೆಯುರಿಯಿಂದ ರಕ್ಷಿಸುತ್ತದೆ
ಆಮ್ಲೀಯತೆ ಹಾಗೂ ಎದೆಯುರಿಯಿಂದ ರಕ್ಷಿಸುತ್ತದೆ
ಎಡಮಗ್ಗುಲಲ್ಲಿ ಮಲಗುವ ಮೂಲಕ ಜೀರ್ಣರಸಗಳಿಗೆ ಹಿಮ್ಮುಖವಾಗಿ ಸಾಗಲು ಅವಕಾಶವೇ ದೊರಕದಂತಾಗುತ್ತದೆ. ಇದರಿಂದ ಅನ್ನನಾಳದ ಒಳಗಿನಿಂದ ಜೀರ್ಣಗೊಂಡ ಆಹಾರ ಹಿಂದೆ ಬಂದು ಎದುರಾಗುವ ಹುಳಿತೇಗು, ಆಮ್ಲೀಯತೆ, ಎದೆಯುರಿ ಮೊದಲಾದ ತೊಂದರೆಗಳು ಇಲ್ಲವಾಗುತ್ತವೆ.

ಮುಂಜಾನೆಯ ಸುಸ್ತಿನಿಂದ ರಕ್ಷಿಸುತ್ತದೆ
ಕೊಬ್ಬಿನ ಬಳಕೆ ಹಾಗೂ ಯಕೃತ್ ನ ಕೊಬ್ಬಿನಿಂದ ರಕ್ಷಣೆ
ಎಡಮಗ್ಗುಲಲ್ಲಿ ಮಲಗುವ ಮೂಲಕ ಯಕೃತ್ ಹಾಗೂ ಪಿತ್ತಕೋಶಗಳು ತಮ್ಮ ಸ್ಥಾನದಲ್ಲಿ ಯಾವುದೇ ಭಾರವಿಲ್ಲದೇ ಜೋತುಬೀಳಲು ಸಾಧ್ಯವಾಗುತ್ತದೆ. ಪರಿಣಾಮವಾಗಿ ಹೆಚ್ಚಿನ ಪಿತ್ತರಸ ಸ್ರವಿಸುತ್ತದೆ ಹಾಗೂ ಯಾವುದೇ ಬಗೆಯಲ್ಲಿ ಈ ರಸ ವ್ಯರ್ಥವಾಗುವುದಿಲ್ಲ. ಇದರಿಂದ ಆಹಾರ ಸುಲಭವಾಗಿ ಹಾಗೂ ಪೂರ್ಣಪಮಾಣದಲ್ಲಿ ಜೀರ್ಣಗೊಳ್ಳುತ್ತದೆ. ಪರಿಣಾಮವಾಗಿ ಮುಂಜಾನೆ ಎದುರಾಗುವ ಸುಸ್ತಿನಿಂದ ಕಾಪಾಡುತ್ತದೆ.

ಕೊಬ್ಬಿನ ಬಳಕೆ ಹಾಗೂ ಯಕೃತ್ ನ ಕೊಬ್ಬಿನಿಂದ ರಕ್ಷಣೆ

ಅಹಾರದ ಮೂಲಕ ಲಭಿಸುವ ಕೊಬ್ಬನ್ನು ಕರಗಿಸಲು ಪಿತ್ತಕೋಶ ಹಾಗೂ ಯಕೃತ್ ನಿಂದ ಸ್ರವಿಸಿದ ರಸಗಳು ಅವಶ್ಯವಾಗಿದೆ. ಈ ಕ್ರಿಯೆಗೆ emulsification ಎಂದು ಕರೆಯುತ್ತಾರೆ. ಎಡಮಗ್ಗುವಲ್ಲಿ ಮಲಗುವ ಮೂಲಕ ಪಿತ್ತಕೋಶದ ರಸ ಗರಿಷ್ಟ ಪ್ರಮಾಣದಲ್ಲಿ ಉತ್ಪತ್ತಿಯಾಗಿ ಸ್ರವಿಸುವುದರಿಂದ ಕೊಬ್ಬಿನ ಕಣಗಳು ಸಹಾ ಗರಿಷ್ಟ ಪ್ರಮಾಣದಲ್ಲಿ ಚಿಕ್ಕ ಚಿಕ್ಕ ಕಣಗಳಾಗಿ ಒಡೆಯುತ್ತವೆ. ಪರಿಣಾಮವಾಗಿ ಒಡೆಯದೇ ಹೋದ ಕೊಬ್ಬು ಯಕೃತ್ ನಲ್ಲಿ ಸಂಗ್ರಹವಾಗುವುದರಿಂದ ರಕ್ಷಣೆ ಒದಗುತ್ತದೆ.

ಸುಖವಾದ ವಿಸರ್ಜನೆಗೆ ಸಹಕರಿಸುತ್ತದೆ

ಸುಖವಾದ ವಿಸರ್ಜನೆಗೆ ಸಹಕರಿಸುತ್ತದೆ
ಎಡಮಗ್ಗಲಲ್ಲಿ ಮಲಗುವ ಮೂಲಕ ಈ ರವಾನೆ ಕೆಲಸಕ್ಕೆ ಗುರುತ್ವಾಕರ್ಷಣೆ ನೆರವಾಗುವುದರಿಂದ ಯಾವುದೇ ಕಷ್ಟವಿಲ್ಲದೇ ಸಣ್ಣಕರುಳಿನಿಂದ ತ್ಯಾಜ್ಯ ದೊಡ್ಡ ಕರುಳಿಗೆ ಬರುತ್ತದೆ. ಮರುದಿನ ದೊಡ್ಡ ಕರುಳಿನಲ್ಲಿ ಸಂಗ್ರಹವಾಗಿದ್ದ ತ್ಯಾಜ್ಯ ಸುಲಭವಾಗಿ, ಕಡಿಮೆ ಒತ್ತಡದಲ್ಲಿ ವಿಸರ್ಜನೆಗೊಳ್ಳಲು ಸಹಕಾರಿಯಾಗಿದೆ.

ಬುಧವಾರ, ಡಿಸೆಂಬರ್ 20, 2017

ಪ್ರೋಟೀನು ಬೇಕೆಂದಿದ್ದರೆ ಮೊಟ್ಟೆಯೇ ಆಗಬೇಕೆಂದೇನಿಲ್ಲ-ಈ ಹನ್ನೊಂದು ಆಹಾರಗಳಲ್ಲಿ ಇನ್ನೂ ಹೆಚ್ಚಿದೆ

-ಅರ್ಶದ್ ಹುಸೇನ್ ಎಂ.ಹೆಚ್, ದುಬೈ
ಬೋಲ್ಡ್ ಸ್ಕೈ.ಕಾಂ ತಾಣದಲ್ಲಿ ಪ್ರಕಟವಾದ ಲೇಖನ
https://goo.gl/MUwC4C


ಸಾಮಾನ್ಯವಾಗಿ ದೃಢಕಾಯರು ತಮ್ಮ ಸ್ನಾಯುಗಳನ್ನು ಹುರಿಗಟ್ಟಿಸಲು ಮೊಟ್ಟೆ ಹಾಗೂ ಮಾಂಸಾಹಾರವನ್ನು ಹೆಚ್ಚು ನೆಚ್ಚಿಕೊಳ್ಳುತ್ತಾರೆ. ಮೊಟ್ಟೆಯಲ್ಲಿರುವ ಪ್ರೋಟೀನು ಇದಕ್ಕೆ ಪ್ರಮುಖ ಕಾರಣ. ಒಂದು ಮೊಟ್ಟೆಯಲ್ಲಿ ಸುಮಾರು ಆರು ಗ್ರಾಂ ಪ್ರೋಟೀನು ಇರುತ್ತದೆ ಹಾಗೂ ಉತ್ತಮ ಪ್ರಮಾಣದ ವಿವಿಧ ವಿಟಮಿನ್ನುಗಳು, ಖನಿಜಗಳು ಹಾಗೂ ಅವಶ್ಯಕ ಸಂಯುಕ್ತಗಳೂ ಇವೆ. ಈ ಎಲ್ಲಾ ಗುಣಗಳಿಂದಾಗಿಯೇ ಮೊಟ್ಟೆ ಒಂದು ಪರಿಪೂರ್ಣ ಆಹಾರವಾಗಿದೆ. ಒಂದು ವೇಳೆ ಸಸ್ಯಾಹಾರಿಗಳು ಸ್ನಾಯುಗಳನ್ನು ಹುರಿಗಟ್ಟಿಸಬೇಕೆಂದು ಇಚ್ಛಿಸಿದರೆ? ಮೊಟ್ಟೆ ಹಾಗೂ ಮಾಂಸಾಹಾರದ ಸೇವನೆಯ ಹೊರತಾಗಿ ಇದು ಸಾಧ್ಯವಾಗಬಲ್ಲುದೇ ಎಂಬ ಸಂಶಯ ಮೂಡುವುದು ಸಹಜ. ಆದರೆ ನಿಸರ್ಗ ಇವರಿಗೂ ಕೆಲವು ಆಹಾರಗಳ ಮೂಲಕ ಮೊಟ್ಟೆಯಿಂತಲೂ ಹೆಚ್ಚಿನ ಪ್ರೋಟೀನುಗಳನ್ನು ಒದಗಿಸುವ ಮೂಲಕ ಸ್ನಾಯುಗಳನ್ನು ಹುರಿಗಟ್ಟಿಸಲು ಸಮಾನವಾದ ಅವಕಾಶ ನೀಡಿದೆ. ಬನ್ನಿ, ಇವು ಯಾವುವು ಎಂದು ನೋಡೋಣ:

#1 ಹೆಸರು ಕಾಳು:
ಹೆಸರು ಕಾಳು
ಹಚ್ಚ ಹಸುರಿನ, ಪುಟ್ಟ ಹೆಸರು ಕಾಳಿನ ಕವಚವನ್ನು ತೆಗೆದಾಗ ಇದು ಹೆಸರು ಬೇಳೆಯಾಗುತ್ತದೆ. ಆದರೆ ಈ ಹೆಸರು ಕಾಳನ್ನು ನೆನೆಸಿಟ್ಟು ಪುಟ್ಟ ಮೊಳಕೆಯೊಡೆದ ಬಳಿಕ ಇದರ ಪೋಷಕಾಂಶಗಳು ಅದ್ಭುತವಾಗಿ ವೃದ್ದಿಸುತ್ತವೆ. ಈ ಕಾಳುಗಳನ್ನು ಬೇಯಿಸಿದ ಖಾದ್ಯಗಳು ಎಲ್ಲವೂ ಇಷ್ಟಪಡುವ ಪರಿಮಳ ಹಾಗೂ ರುಚಿಯನ್ನು ಹೊಂದಿರುತ್ತವೆ. ಹೆಸರು ಕಾಳಿನಲ್ಲಿ ಪೊಟ್ಯಾಶಿಯಂ, ಕಬ್ಬಿಣ, ವಿಟಮಿನ್ ಸಿ, ಕರಗುವ ಮೊದಲಾದ ಪೋಷಕಾಂಶಗಳು ಉತ್ತಮ ಪ್ರಮಾಣದಲ್ಲಿವೆ. ನೂರು ಗ್ರಾಂ ಒಣಗಿಸಿದ ಹೆಸರು ಕಾಳನ್ನು ಬೇಯಿಸಿ ಅಡುಗೆ ಮಾಡಿದಾಗ ಮೂರು ಗ್ರಾಂ ಪ್ರೋಟೀನ್ ಲಭ್ಯವಾದರೆ, ಇದೇ ಪ್ರಮಾಣದ ಹೆಸರು ಕಾಳನ್ನು ಮೊಳಕೆ ಬರಿಸಿ ಸೇವಿಸಿದಾಗ ಏಳು ಗ್ರಾಂ ಪ್ರೋಟೀನು ಸಿಗುತ್ತದೆ. ಆ ಪ್ರಕಾರ ಕೇವಲ ನೂರು ಗ್ರಾಂ ಹೆಸರು ಕಾಳನ್ನು ಮೊಳಕೆ ಬರಿಸಿ ಸೇವಿಸುವುದರಿಂದ ಮೊಟ್ಟೆಗಿಂತಲೂ ಹೆಚ್ಚಿನ ಪ್ರೋಟೀನನ್ನು ಪಡೆಯಬಹುದು.


#2 ಕಡಲೆ ಕಾಳು
ಕಡಲೆ ಕಾಳು
ಕಡಲೆ ಕಾಳಿನಲ್ಲಿಯೂ ಉತ್ತಮ ಪ್ರಮಾಣದ ಪ್ರೋಟೀನು ಇದ್ದು ರುಚಿಕರವೂ ಆಗಿದೆ. ಅಲ್ಲದೇ ಇದರಲ್ಲಿರುವ ಕೆಲವು ಪೋಷಕಾಂಶಗಳಿಗೆ  ಹಸಿವನ್ನು ನಿಗ್ರಹಿಸುವ cholecystokinin (ಖೊಲೆಸಿಸ್ಟೋಕೈನಿನ್) ಎಂಬ ರಸದೂತವನ್ನು ಹೆಚ್ಚು ಉತ್ಪಾದಿಸಲು ಪ್ರಚೋದಿಸುವ ಗುಣವಿದೆ. ಅಲ್ಲದೇ ಸಕ್ಕರೆಯ ಸೇವನೆಯಿಂದ ಜಠರ ಹಾಗೂ ಕರುಳುಗಳ ಒಳಭಾಗದಲ್ಲಿ ಉಂಟಾಗುವ ಉರಿಯೂತವನ್ನೂ ಕಡಿಮೆ ಮಾಡುತ್ತದೆ.

#3ಅಗಸೆ ಬೀಜ (Hemp Seeds):
ಅಗಸೆ ಬೀಜ (Hemp Seeds)
ಇವುಗಳ ಹೃದಯಾಕಾರದಿಂದಾಗಿ ಹೆಂಪ್ ಹಾರ್ಟ್ಸ್ ಎಂಬ ಅನ್ವರ್ಥನಾಮವನ್ನೂ ಪಡೆದಿರುವ ಈ ಕಾಳುಗಳಲ್ಲಿ ಅದ್ಭುತ ಪ್ರಮಾಣದ ಪ್ರೋಟೀನ್ ಇದೆ. ಕೇವಲ ಎರಡು ದೊಡ್ಡ ಚಮಚದಲ್ಲಿ  6.3 ಗ್ರಾಂ ಪ್ರೋಟೀನ್ ಇದೆ. ಅಲ್ಲದೇ ಹೃದಯದ ಆರೋಗ್ಯ ಹೆಚ್ಚಿಸುವ ಆಲ್ಫಾ ಲಿನೋಲಿಕ್ ಆಮ್ಲ ಹಾಗೂ ಒಮೆಗಾ ೩ ಕೊಬ್ಬಿನ ಆಮ್ಲಗಳೂ ಇವೆ.

#4 ಹಸಿ ಸೋಯಾ ಅವರೆ ಕಾಳು (Edamame Beans)
ಹಸಿ ಸೋಯಾ ಅವರೆ ಕಾಳು (Edamame Beans)
ಸೋಬಾ ಅವರೆ ಇನ್ನೂ ಎಳೆಯದಾಗಿದ್ದಾಗ ಇವುಗಳ ಕವಚದಿಂದ ಬೇರ್ಪಡಿಸಿದ ಕಾಳುಗಳಲ್ಲಿ ಅತಿ ಹೆಚ್ಚಿನ ಪ್ರಮಾಣದ ಪ್ರೋಟೀನ್ ಇದೆ. Edamame ಎಂಬುದು ಜಾಪಾನೀಯರ ಸಾಂಪ್ರಾದಾಯಿಕವಾದ ಸೋಯಾ ಅವರೆಯನ್ನು ಉಪ್ಪಿನೊಂದಿಗೆ ಕುದಿಸಿದ ಖಾದ್ಯದ ಹೆಸರೂ ಆಗಿದೆ. ಈ ಕಾಳುಗಳಲ್ಲಿ ಆರೋಗ್ಯಕ್ಕೆ ಅಗತ್ಯವಾದ ಅಮೈನೋ ಆಮ್ಲಗಳು ಹಾಗೂ ವಿಶೇಷವಾಗಿ ಸ್ನಾಯುಗಳ ಬೆಳವಣಿಗೆಗೆ ಅಗತ್ಯವಾದ ಸಂಕುಲ ಅಮೈನೋ ಆಮ್ಲಗಳೂ ಹೆಚ್ಚಿನ ಪ್ರಮಾಣದಲ್ಲಿವೆ.

#5 ಚೆಡ್ಡಾರ್ ಗಿಣ್ಣು (Cheddar Cheese)
ಚೆಡ್ಡಾರ್ ಗಿಣ್ಣು (Cheddar Cheese)
ಈ ಗಿಣ್ಣಿನ ರುಚಿಯನ್ನು ಯಾರಿಗೂ ಅಲ್ಲಗಳೆಯಲು ಸಾಧ್ಯವೇ ಇಲ್ಲ. ಅದರಲ್ಲೂ ಮಕ್ಕಳ ತಿನಿಸುಗಳಾದ ಚೀಟೋಸ್ ಮೊದಲಾದವುಗಳಲ್ಲಿ ಈ ಗಿಣ್ಣಿನ ಅಂಶವನ್ನು ರುಚಿಗಾಗಿ ಬೆರೆಸಿರುತ್ತಾರೆ. ನೀವು ಅರಿತಿರುವಂತೆ ಎಲ್ಲಾ ಗಿಣ್ಣುಗಳಲ್ಲಿ ಪ್ರೋಟೀನುಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಆದರೆ ಈ ಗಿಣ್ಣಿನಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಪ್ರೋಟೀನುಗಳಿವೆ. ಜೊತೆಗೇ ಅವಶ್ಯಕ ಕೊಬ್ಬು, ವಿಟಮಿನ್ ಡಿ ಹಾಗೂ ಕ್ಯಾಲ್ಸಿಯಂ ಸಹಾ ಇವೆ.


#6 ಕಪ್ಪು ಹುರಳಿ (Black beans)
ಕಪ್ಪು ಹುರಳಿ (Black beans)
ಮೆಕ್ಸಿಕನ್ ಆಹಾರವನ್ನು ಇಷ್ಟಪಡುವವರಿಗೆ ಕಪ್ಪು ಹುರುಳಿ ಅಪರಿಚಿತವಲ್ಲ. ಈ ಆಹಾರಗಳಲ್ಲಿ ಕೊಂಚ ಕುರುಕು ಇರುವಂತೆ ಕಪ್ಪು ಹುರುಳಿಯನ್ನು ಬೇಯಿಸಲಾಗಿರುತ್ತದೆ. ವಿಶೇಷವಾಗಿ ಟಾಕೋ ಹಾಗೂ ಬುರಿಟೋ ಬೌಲ್ ಗಳಲ್ಲಿ ಈ ಹುರುಳಿ ಯಥೇಚ್ಛವಾಗಿರುತ್ತದೆ.  ಈ ಕಾಳುಗಳಲ್ಲಿ ಹೆಚ್ಚಿನ ಪ್ರಮಾಣದ ಪ್ರೋಟೀನ್ ಇದೆ (ಅರ್ಧ ಕಪ್ ಹುರುಳಿಯಲ್ಲಿ 7.3ಗ್ರಾಂ!) ಜೊತೆಗೇ ಇದರಲ್ಲಿ ಹೃದಯಕ್ಕೆ ನೆರವಾಗುವ ಕೊಬ್ಬು ಹಾಗೂ ಮೆದುಳಿಗೆ ನೆರವಾಗುವ ಆಂಥೋಸೈಯಾನಿನ್ ಸಹಾ ಇದೆ. ಇದರ ಸೇವನೆಯಿಂದ ಮೆದುಳಿನ ಕ್ಷಮತೆಯೂ ಹೆಚ್ಚುತ್ತದೆ.

#7 ರಾಜ್ಮಾ (Red Kidney Beans)
ರಾಜ್ಮಾ (Red Kidney Beans)
ಕೆಂಪು ಹುರುಳಿ ಅಥವಾ ರಾಜ್ಮಾ ಎಂದು ಭಾರತದಲ್ಲಿ ಜನಪ್ರಿಯವಾದ ಈ ಅವರೆ ಕಾಳು ಸಹಾ ಪ್ರೋಟೀನ್ ಭರಿತವಾಗಿದ್ದು ಹೆಚ್ಚಿನ ಪ್ರಮಾಣದ ಕರಗುವ ನಾರು ಸಹಾ ಇದೆ. ಇದು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಕಡಿಮೆಗೊಳಿಸುವುದರಿಂದ ಮಧುಮೇಹಿಗಳಿಗೂ ಸೂಕ್ತವಾದ ಆಹಾರವಾಗಿದೆ.

#8 ಪೀನಟ್ ಬಟರ್
ಪೀನಟ್ ಬಟರ್
ಇದರಲ್ಲಿ ಮೆದುಳಿಗೆ ಅಗತ್ಯವಾದ ಕೊಬ್ಬುಗಳು ಹೇರಳವಾಗಿದೆ ಹಾಗೂ ಶೇಂಗಾಬೀಜಗಳಲ್ಲಿರುವ ಪ್ರೋಟೀನ್  ಸಹಾ ಹೆಚ್ಚಿನ ಪ್ರಮಾಣದಲ್ಲಿದೆ. ಇದೇ ಕಾರಣದಿಂದ ಇದು ಸಸ್ಯಾಹಾರಿಗಳಿಗೆ ಉತ್ತಮ ಆಯ್ಕೆಯಾಗಿದೆ. ಎರಡು ದೊಡ್ಡಚಮಚದಷ್ಟು ಪ್ರಮಾಣದಲ್ಲಿ 8ಗ್ರಾಂ ಪ್ರೋಟೀನ್ ಇದೆ.

#9 ಚಿಯಾ ಬೀಜಗಳು:  (Chia Seeds)
ಚಿಯಾ ಬೀಜಗಳು:(Chia Seeds)
ದಕ್ಷಿಣ ಅಮೇರಿಕಾದ ಫಲವತ್ತಾದ ಭೂಮಿಯಲ್ಲಿ ಬೆಳೆದ ಈ ಬೀಜಗಳು ಆರೋಗ್ಯದ ಕಾಳಜಿ ಇರುವ ಯಾರಿಗೂ ಅಗತ್ಯವಾದ ಆಹಾರವಾಗಿದೆ. ಇದರಲ್ಲಿರುವ ಹೆಚ್ಚಿನ ಪ್ರಮಾಣದ ಪ್ರೋಟೀನ್ ಹಾಗೂ ವಿಶೇಷವಾಗಿ ರಾತ್ರಿ ನೆನೆಸಿಟ್ಟರೆ ಬೆಳಗಾಗುವಷ್ಟರಲ್ಲಿ ಮೂಲಗಾತ್ರಕ್ಕೂ ಹತ್ತು ಪಟ್ಟು ದೊಡ್ಡದಾಗುವ ಮೂಲಕ ಪೋಷಕಾಂಶಗಳನ್ನೂ ಹೆಚ್ಚಿಸಿಕೊಳ್ಳುವುದು ಈ ಕಾಳುಗಳನ್ನು ಆಯ್ದುಕೊಳ್ಳಲು ಸಸ್ಯಾಹಾರಿಗಳಿಗೆ ನೆರವಾಗುತ್ತದೆ.


#10 ಕ್ವಿನೋವಾ (Quinoa)
ಕ್ವಿನೋವಾ (Quinoa)
ಈ ಕಾಳುಗಳಲ್ಲಿ ಗೋಧಿಯಲ್ಲಿರುವ ಗೋಂದಿನಂತಹ ಪದಾರ್ಥವಾದ ಗ್ಲುಟೆನ್ ಇಲ್ಲವೇ ಇಲ್ಲ. ಅಲ್ಲದೇ ಪುರಾತನ ಇಂಕಾಗಳ ನೆಚ್ಚಿನ ಆಹಾರವೂ ಆಗಿತ್ತು. ಇದರಲ್ಲಿ ಹೆಚ್ಚಿನ ಪ್ರಮಾಣದ ಕರಗದ ನಾರು ಹಾಗೂ ಹೆಚ್ಚಿನ ಪ್ರಮಾಣದ ಪ್ರೋಟೀನ್ ಸಹಾ ಇದೆ. ಜೊತೆಗೇ ಉತ್ತಮ ಪ್ರಮಾಣದ ಎಲ್-ಆರ್ಜಿನೈನ್ ಸಹಿತ ಇತರ ಅವಶ್ಯಕ ಅಮೈನೋ ಆಮ್ಲಗಳೂ ಇದ್ದು ಸ್ನಾಯುಗಳ ಬೆಳವಣಿಗೆಗೆ ನೆರವಾಗುತ್ತದೆ.

#11 ಹಾಲು
ಹಾಲು
ಹಾಲಿನಲ್ಲಿ ಪ್ರೋಟೀನು ಉತ್ತಮ ಪ್ರಮಾಣದಲ್ಲಿದ್ದು ನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳಲು ಪ್ರಮುಖ ಕಾರಣವಾಗಿದೆ. (ಆದರೆ ಲ್ಯಾಕ್ಟೋಸ್ ಅಲರ್ಜಿ ಇರುವ ವ್ಯಕ್ತಿಗಳಿ ಮಾತ್ರ ಸೂಕ್ತವಲ್ಲ) ಅಲ್ಲದೇ  ಹಾಲಿನಲ್ಲಿರುವ ಕ್ಯಾಲ್ಸಿಯಂ ಹಾಗೂ ಒಮೆಗಾ ೩ ಕೊಬ್ಬಿನ ಆಮ್ಲಗಳೂ ಮೂಳೆ ಹಾಗೂ ಸ್ನಾಯುಗಳ ಬೆಳವಣಿಗೆಗೆ ನೆರವಾಗುತ್ತದೆ.