ಈ ಬ್ಲಾಗ್ ಅನ್ನು ಹುಡುಕಿ
ಭಾನುವಾರ, ಜನವರಿ 24, 2010
ಬೇಕಾಗಿದ್ದಾರೆ-ಸೋಮಾರಿಗಳು : ಸುಮ್ಮನೆ ಮಲಗುವುದೇ ಕೆಲಸ
ಹೌದು, ಹಾಲಿಡೇ ಇನ್ ಸಹಿತ ವಿಶ್ವದ ಹಲವು ಪ್ರತಿಷ್ಠಿತ ಹೋಟೆಲುಗಳು ಈ ಹೊಸ ಉದ್ಯೋಗವನ್ನು ಸೃಷ್ಟಿಸಿವೆ. ಉದ್ಯೋಗದ ಹೆಸರು - ಬೆಡ್ ವಾರ್ಮರ್.
ವಾಸ್ತವವಾಗಿ ಇದೊಂದು ಕೋರಿಕೆಯ ಸೇವೆ. ವ್ಯಕ್ತಿ ಶ್ರೀಮಂತನಾಗುತ್ತಾ ಹೋದಂತೆ ಆತನ ಬೇಕುಬೇಡಗಳೂ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಳ್ಳುತ್ತವೆ. ಸ್ನಾನದ ನೀರು ಇಷ್ಟೇ ಬಿಸಿ ಇರಬೇಕು, ಇಷ್ಟೇ ಹೊತ್ತಿಗೆ ಸ್ನಾನ ಮಾಡಬೇಕು, ಚಹಾದಲ್ಲಿ ಸಕ್ಕರೆ ಇಷ್ಟೇ ಇರಬೇಕು, ಇದೇ ಬ್ರಾಂಡಿನ ಉತ್ಪನ್ನವಾಗಬೇಕು, ಇಷ್ಟೇ ಘಂಟೆಗೆ ತಲುಪಬೇಕು, ತಾನು ಕೊಠಡಿ ತಲುಪುವ ಮೊದಲು ಕೊಠಡಿಯ ಏಸಿ ಚಾಲೂ ಇರಬೇಕು ಇತ್ಯಾದಿ ಇತ್ಯಾದಿ. ಇದಕ್ಕೊಂದು ಹೊಸ ಸೇರ್ಪಡೆ ತಾವು ಮಲಗುವ ಹಾಸಿಗೆ ಅಹ್ಲಾದಕರವಾಗಿ ಬೆಚ್ಚಗಿರಬೇಕು, ಅಂದರೆ ಬರೋಬ್ಬರಿ ಅರವತ್ತೆಂಟು ಡಿಗ್ರಿ ಫ್ಯಾರೆನ್ ಹೈಟ್ ಇರಬೇಕು.
ಬೇರೆ ವಿಧಾನಗಳಿಂದ ಈ ತಾಪಮಾನವನ್ನು ಪಡೆಯಬಹುದಾದರೂ ಸ್ವಾಭಾವಿಕವಾಗಿ ವ್ಯಕ್ತಿಯೊಬ್ಬ ಮಲಗಿ ಹೊರಬಂದ ಹಾಸಿಗೆ ಅತ್ಯಂತ ಕರಾರುವಕ್ಕಾಗಿ ಅರವತ್ತೆಂಟು ಡಿಗ್ರಿ ಫ್ಯಾರೆನ್ ಹೈಟ್ ಇರುತ್ತದೆಂದು ಸಂಶೋಧನೆಗಳಿಂದ ಧೃಢಪಟ್ಟಿದೆ. ಈ ನಿಟ್ಟಿನಲ್ಲಿ ಒಂದು ವೇಳೆ ಗ್ರಾಹಕ ಬಯಸಿದರೆ ಆತ ಬರುವ ಮೊದಲು ತನ್ನ ದೇಹದ ಬಿಸಿಯನ್ನು ಹಾಸಿಗೆಗೆ ವರ್ಗಾಯಿಸುವ ಸೇವೆಗೆ ಮುಡಿಪಾದ ವ್ಯಕ್ತಿ ಒಂದು ನಿಗದಿತ ಅವಧಿಯಲ್ಲಿ ಗ್ರಾಹಕನ ಹಾಸಿಗೆಯಲ್ಲಿ ಮಲಗಿ ಗ್ರಾಹಕ ಬರುವ ಕೊಂಚ ಹೊತ್ತಿನ ಮೊದಲು ಹಾಸಿಗೆ ಖಾಲಿ ಮಾಡುತ್ತಾನೆ. ಗ್ರಾಹಕ ಬಂದ ಕೂಡಲೇ ಅತ್ಯಂತ ಆಹ್ಲಾದಕರವಾದ ಬೆಚ್ಚನೆಯ ಹಾಸಿಗೆ ಲಭ್ಯ. ಈ ಸೇವೆ ಯೂರೋಪಿಯನ್ ರಾಷ್ಟ್ರಗಳಲ್ಲಿ ಗ್ರಾಹಕ ಹೊರಗೆ ಕೊರೆಯುವ ಚಳಿಯಿಂದ ಥಂಡಿಯಾಗಿ ಬಂದಾಗ ಆಹ್ಲಾದಕರ ತಾಪಮಾನ ತಲುಪಲು ಹೆಚ್ಚಿನ ಸಮಯ ಬೇಕಾಗುವುದರಿಂದ ತಕ್ಷಣ ಬೆಚ್ಚಗಿರುವ ಹಾಸಿಗೆಗೆ ಹೆಚ್ಚಿನ ಬೇಡಿಕೆ.
ಸೋಮಾರಿಯಾಗಿ ಮಲಗುವವರಿಗೆ ಭಲೇ ಅದೃಷ್ಟ ಕಾದಿದೆ ಎನ್ನೋಣವೇ?
ಕೃಪೆ: ದ ಟೆಲಿಗ್ರಾಫ್.
ಗುರುವಾರ, ಜನವರಿ 21, 2010
ಮೊರೊಕ್ಕೋದ ಮರ ಹತ್ತುವ ಕುರಿಗಳು
ಶುಕ್ರವಾರ, ಜನವರಿ 15, 2010
ತೈವಾನಿನಲ್ಲಿ ವಿಶ್ವದ ಪ್ರಥಮ ಸಂಪೂರ್ಣ ಸೂರ್ಯಶಕ್ತಿ ಆಧಾರಿತ ಕ್ರೀಡಾಂಗಣ








ಗುರುವಾರ, ಜನವರಿ 14, 2010
ಕೊಳಕು ನೀರು ಶುದ್ಧೀಕರಿಸಲು ’ಒಸಾರ್ಬ್’ ಸ್ಪಂಜು - ಹೊಸವರ್ಷದ ಕೊಡುಗೆ

ಗುರುವಾರ, ಜನವರಿ 7, 2010
ಎರೆಡು ರೂಪಾಯಿ ಡಾಕ್ಟ್ರು
ಅರ್ಶದ್ ಹುಸೇನ್ ಎಂ.ಹೆಚ್. ದುಬೈ.
ಪ್ರಥಮ ಭೇಟಿಗೆ ಈ ಡಾಕ್ಟ್ರು ವಿಧಿಸುವುದು ಎರೆಡು ರೂಪಾಯಿ, ಎರಡನೆಯ ಭೇಟಿಗೆ?…. ಒಂದು ರೂಪಾಯಿ
ಲಕ್ಷಗಟ್ಟಲೇ ಡೊನೇಶನ್ ನೀಡಿ ಎಂಬಿಬಿಎಸ್ ಮಾಡಿ ಲಕ್ಷಗಟ್ಟಲೇ ಕಮಾಯಿಸುವ ನಿಟ್ಟಿನಲ್ಲಿ ವೈದ್ಯರಾಗುವವರ ಇಂದಿನ ದಿನಗಳಲ್ಲಿ ಯಾರಾದರೂ ಬಡವರ ಸೇವೆ ಮಾಡುತ್ತೇನೆ, ಹಳ್ಳಿಗೆ ಹೋಗುತ್ತೇನೆ ಎಂದರೆ ನಗುವವರ ಸಂಖ್ಯೆಯೇ ಹೆಚ್ಚು.
ಆದರೆ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಮಹಾರಾಷ್ಟ್ರದ ಅತ್ಯಂತ ಹಿಂದುಳಿದ ಪ್ರದೇಶವಾದ ಮೇಲ್ಘಾಟ್ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ರವೀಂದ್ರ ಕೊಯ್ಲೆ ನಿಜಕ್ಕೂ ಅಭಿನಂದನಾರ್ಹರು.
ಎಂ.ಬಿ.ಬಿ.ಎಸ್ ಮತ್ತು ಎಂ.ಡಿ. ಪದವಿಗಳನ್ನು ಪಡೆದ ಡಾ. ರವೀಂದ್ರ ಮನಸ್ಸು ಮಾಡಿದ್ದರೆ ನಗರದಲ್ಲಿದ್ದು ಲಕ್ಷಗಟ್ಟಲೇ ದುಡಿಯಬಹುದಿತ್ತು. ಆದರೆ ಗಾಂಧೀಜಿ ಮತ್ತು ವಿನೋಬಾ ಭಾವೆಯವರ ಅಪ್ಪಟ ಅಭಿಮಾನಿಯಾದ ಅವರು ವಿದ್ಯಾರ್ಥಿದೆಸೆಯಲ್ಲಿದ್ದಾಗ ಓದಿದ್ದ ರಸ್ಕಿನ್ ಬಾಂಡ್ ರವರ ವಾಕ್ಯಗಳು ಅವರ ಜೀವನದ ಮೇಲೆ ಗಾಢ ಪ್ರಭಾವ ಬೀರಿದ್ದವು. ’ನಿಮಗೆ ನಿಜವಾಗಿಯೂ ಜನಸೇವೆ ಮಾಡಬೇಕೆಂದಿದ್ದರೆ ಮೊದಲು ಅತ್ಯಂತ ಬಡವರಿಗೆ ಹಾಗೂ ಅತ್ಯಂತ ನಿರ್ಲಕ್ಷ್ಯಕ್ಕೆ ಒಳಗಾದವವ ನಡುವೆ ಕಾರ್ಯನಿರ್ವಹಿಸಿ’ ಎಂದು ರಸ್ಕಿನ್ ಬಾಂಡ್ ಕರೆಯಿತ್ತಿದ್ದರು. ಆಗ ನಾಗಪುರ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಾಗಿದ್ದ ಡಾ. ರವೀಂದ್ರ ಪದವಿ ಪಡೆದ ಬಳಿಕ ವೈದ್ಯಕೀಯ ಸೇವೆ ಅತ್ಯಂತ ದುರ್ಲಭವಾದೆಡೆ ತನ್ನ ಸೇವೆ ಮುಡಿಪು ಎಂದು ಸಂಕಲ್ಪಮಾಡಿಕೊಂಡಿಟ್ಟು ಬಿಟ್ಟಿದ್ದರು.
ಎಂ.ಬಿ.ಬಿ.ಎಸ್. ಪದವಿ ಪಡೆದ ಬಳಿಕ ಅವರು ಮಹಾರಾಷ್ಟ್ರ್ಅ, ಗುಜರಾತ್ ಮತ್ತು ಮಧ್ಯಪ್ರದೇಶದ ಗ್ರಾಮಪ್ರದೇಶಗಳಿಗೆ ಭೇಟಿ ನೀಡಿ ಕಡೆಗೆ ಮಹಾರಾಷ್ಟ್ರದ ಗಾದ್ರಿಚೋಲಿ ಎಂಬ ಪ್ರದೇಶದಲ್ಲಿ ತಮ್ಮ ಸೇವೆ ಆರಂಭಿಸಿದರು. ಆದರೆ ಆ ಪ್ರದೇಶದಲ್ಲಿ ನಕ್ಸಲರ ಕಾಟ ಅತಿಯಾಗಿದ್ದು ತನ್ನ ಮಗನ ಕ್ಷೇಮದ ಕಾಳಜಿ ವಹಿಸಿದ ಅವರ ತಾಯಿ ಅಷ್ಟೇ ಹಿಂದುಳಿದ ಪ್ರದೇಶವಾದ ಆದರೆ ಸುರಕ್ಷಿತವಾದ ಮೇಲ್ಘಾಟ್ ಎಂಬಲ್ಲಿ ಅವರ ಸೇವೆ ನೀಡಲು ಆಗ್ರಹಿಸಿದ್ದರು. ತಮ್ಮ ತಾಯಿಯ ಹಿತವಚನಗಳನ್ನು ಶಿರಾವಹಿಸಿದ ಡಾ. ರವೀಂದ್ರ ಮೇಲ್ಘಾಟಿನಲ್ಲಿ ತಮ್ಮ ಸೇವೆ ಆರಂಭಿಸಿದರು.
ಸುಮಾರು ಒಂದೂವರೆ ವರ್ಷ ತನ್ನ ಸೇವೆಯನ್ನು ಅಲ್ಲಿನ ಜನತೆಗೆ ನೀಡಿದ ಡಾ. ರವೀಂದ್ರರಿಗೆ ಅಲ್ಲಿನ ಜನಗಳಿಗೆ ಕೇವಲ ಮಾತ್ರೆ, ಇಂಜೆಕ್ಷನ್ನುಗಳ ವೈದ್ಯಕೀಯ ಸೇವೆ ಮಾತ್ರವಲ್ಲದೇ ಸಾಮಾಜಿಕ ಕಾಳಜಿಯ ಸಾಂತ್ವಾನವೂ ಅವಶ್ಯಕವಿದೆ ಎಂದು ಮನಗಂಡಿತ್ತು. ನಂತರ ನಾಗಪುರಕ್ಕೆ ಹಿಂದಿರುಗಿ ’ರಕ್ಷಣಾತ್ಮಕ ಮತ್ತು ಸಾಮಾಜಿಕ ವೈದ್ಯಶಾಸ್ತ್ರ’ ಎಂಬ ವಿಷಯದಲ್ಲಿ (MD in preventive and social medicine) ಎಂ.ಡಿ. ಪದವಿಯನ್ನು ಪಡೆದು ಮೇಲ್ಘಾಟಿಗೆ ಹಿಂದಿರುಗಿದರು.
ಅಂದಿನಿಂದ ಸತತವಾಗಿ ಹಿಂದುಳಿದ ಜನರಿಗೆ ಮತ್ತು ಬುಡಕಟ್ಟು ಜನಾಂಗದವರಿಗೆ ವೈದ್ಯಕೀಯ ಮತ್ತು ಸಾಮಾಜಿಕ ಸೇವೆಯನ್ನು ನೀಡುತ್ತಾ ಬಂದಿದ್ದಾರೆ. ಅವರು ಈ ಸೇವೆ ಪ್ರಾರಂಭಿಸಿ ಇಂದಿಗೆ ಇಪ್ಪತ್ತನಾಲ್ಕು ವರ್ಷ ಕಳೆದವು. ಇಂದಿಗೂ ಅವರು ತಮ್ಮ ರೋಗಿಗಳಿಂದ ವಸೂಲು ಮಾಡುವ ಮೊತ್ತ ಮೊದಲನೆಯ ಭೇಟಿಗೆ ಎರೆಡು ರೂ ! ಹಾಗೂ ಮುಂದಿನ ಭೇಟಿಗೆ ಒಂದು ರೂ ! ಆರಂಭಿಕ ದಿನಗಳಲ್ಲಿ ಧರ್ನಿಯಿಂದ ನಲವತ್ತು ಕಿ.ಮೀ. ದೂರವಿರುವ ಬೈರಗಡ ಎಂಬಲ್ಲಿ ಕಾಲ್ನಡಿಗೆಯಿಂದಲೇ ಕ್ರಮಿಸುತ್ತಿದ್ದ ಅವರಿಗೆ ದಾರಿಯಲ್ಲಿ ತಿಂಗಳಿಗೆ ಕನಿಷ್ಟ ಒಂದಾದರೂ ಹುಲಿಯ ದರ್ಶನವಾಗುತ್ತಿತ್ತು. ಕಳೆದ ಮೂರು ವರ್ಷಗಳಿಂದ ಒಂದೂ ಹುಲಿಯನ್ನು ತಾನು ಕಂಡಿಲ್ಲ ಎಂದು ಡಾ. ರವೀಂದ್ರ ತಿಳಿಸುತ್ತಾರೆ.
ಆ ಪ್ರದೇಶದಲ್ಲಿ ವಾಸವಾಗಿರುವ ಕೋರ್ಕು ಎಂಬ ಬುಡಕಟ್ಟು ಜನಾಂಗದ ರಕ್ಷಣೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳದ ಸರ್ಕಾರದ ವಿರುದ್ಧ ಒಮ್ಮೆ ಕೋರ್ಟು ಮೆಟ್ಟಿಲನ್ನೂ ಹತ್ತಿದ್ದರು.
ಡಾ. ರವೀಂದ್ರರಿಗೆ ಜೈ ಹೋ! ಎನ್ನೋಣವೇ
ಸೋಮವಾರ, ಡಿಸೆಂಬರ್ 28, 2009
ಚಾಣಕ್ಯನ ಹದಿನಾರು ಉಕ್ತಿಗಳು

ಚಾಣಕ್ಯ ಕ್ರಿಸ್ತಪೂರ್ವ ೩೫೦ ರಲ್ಲಿ ಉತ್ತರಭಾರತದ (ಈಗಿನ ಬಿಹಾರ) ಪಾಟಲಿಪುತ್ರ ನಗರದಲ್ಲಿ ಜೀವಿಸಿದ್ದ ಮಹಾನ್ ಮೇಧಾವಿ. ಆ ಕಾಲದಲ್ಲಿಯೇ ಹಲವು ಉಕ್ತಿಗಳನ್ನು ಆತ ಪ್ರಸ್ತುತಪಡಿಸಿದ್ದು ಇಂದಿಗೂ ಅವು ಪ್ರಸ್ತುತವಾಗಿವೆ. ಚಾಣಕ್ಯನ ಹಲವಾರು ಉಕ್ತಿಗಳಲ್ಲಿ ಹದಿನಾರನ್ನು ಆರಿಸಿ ಕೆಳಗೆ ವಿವರಿಸಲಾಗಿದೆ.
೧)ಬೇರೊಬ್ಬರ ತಪ್ಪುಗಳಿಂದ ಕಲಿಯಿರಿ, ಎಲ್ಲಾ ತಪ್ಪುಗಳನ್ನು ನೀವೊಬ್ಬರೇ ಮಾಡಲು ನಿಮ್ಮ ಆಯಸ್ಸು ಸಾಲದು
೨)ಅತಿಪ್ರಾಮಾಣಿಕರಾಗದಿರಿ. ನೇರವಾದ ಮರಗಳು ಮೊದಲು ನೆಲಕ್ಕುರುಳುತ್ತವೆ. ಆ ಬಳಿಕ ಡೊಂಕಮರದ ಸರದಿ
೩)ಒಂದು ಹಾವು ವಿಷಯುಕ್ತವಲ್ಲದಿದ್ದರೂ ವಿಷಯುಕ್ತದಂತೆ ಬುಸುಗುಡಬೇಕು
೪)ಅತ್ಯಂತ ದೊಡ್ಡ ಗುರುಮಂತ್ರ : ನಿಮ್ಮ ರಹಸ್ಯಗಳನ್ನು ಯಾರಿಗೂ ಹೇಳಬೇಡಿ, ಅವೇ ನಿಮಗೆ ಮುಳುವಾಗುತ್ತವೆ.
೫)ಪ್ರತಿ ಸ್ನೇಹದ ಹಿಂದೆ ಒಂದು ಸ್ವಾರ್ಥ ಇದ್ದೇ ಇರುತ್ತದೆ. ಸ್ವಾರ್ಥರಹಿರ ಸ್ನೇಹವೇ ಇಲ್ಲ. ಇದೊಂದು ಕಹಿಸತ್ಯ
೬)ಪ್ರತಿ ಕಾರ್ಯಕ್ಕೆ ತೊಡಗುವ ಮುನ್ನ ತಮಗೆ ತಾವೇ ಈ ಮೂರು ಪ್ರಶ್ನೆಗಳನ್ನು ಕೇಳಿಕೊಳ್ಳಿರಿ: ಈ ಕಾರ್ಯ ನಾನೇಕೆ ಮಾಡುತ್ತಿದ್ದೇನೆ? ಈ ಕಾರ್ಯದ ಫಲಗಳೇನು ಮತ್ತು ಈ ಕಾರ್ಯದಲ್ಲಿ ನಾನು ಸಫಲನಾಗುತ್ತೇನೆಯೇ? ಈ ಮೂರೂ ಪ್ರಶ್ನೆಗಳಿಗೆ ಪ್ರಾಮಾಣಿಕವಾದ ಮತ್ತು ಸ್ಪಷ್ಟ ಉತ್ತರ ಸಿಕ್ಕರೆ ಮಾತ್ರ ಮುಂದುವರೆಯಿರಿ. ಇಲ್ಲದಿದ್ದರೆ ಆ ಪ್ರಯತ್ನ ವ್ಯರ್ಥ
೭)ಭಯ ನಿಮ್ಮನ್ನು ಆವರಿಸಲು ಹತ್ತಿರ ಬರುತ್ತಿದ್ದಂತೆ ಅದರ ಮೇಲೆ ಅಕ್ರಮಣ ಮಾಡಿ ಅದನ್ನು ವಿನಾಶಗೊಳಿಸಿಬಿಡಿ
೮)ವಿಶ್ವದ ಅತ್ಯಂತ ದೊಡ್ಡ ಶಕ್ತಿಯೆಂದರೆ ಯುವಶಕ್ತಿ ಹಾಗೂ ಯುವತಿಯ ಸೌಂದರ್ಯ
೯)ಒಂದು ಕಾರ್ಯ ಕೈಗೆತ್ತಿಕೊಂಡ ಬಳಿಕ ವಿಫಲವಾಗುವ ಭಯದಿಂದ ಮಧ್ಯಕ್ಕೆ ನಿಲ್ಲಿಸಬೇಡಿ. ತಮ್ಮ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವವರೆ ಅತ್ಯಂತ ಸುಖಿಗಳು
೧೦)ಹೂವಿನ ಸುಗಂಧ ಗಾಳಿಯಿರುವ ದಿಕ್ಕಿನಲ್ಲಿ ಮಾತ್ರ ಪಸರಿಸುತ್ತದೆ. ಆದರೆ ಓರ್ವ ವ್ಯಕ್ತಿಯ ಒಳ್ಳೆಯತನ ಎಲ್ಲಾ ದಿಕ್ಕುಗಳಲ್ಲಿ ಪಸರಿಸುತ್ತದೆ.
೧೧)ದೇವರು ವಿಗ್ರಹದೊಳಗಿಲ್ಲ. ನಿಮ್ಮ ಭಾವನೆಗಳೇ ನಿಮ್ಮ ದೇವರು. ನಿಮ್ಮ ಆತ್ಮವೇ ದೇವಸ್ಥಾನ
೧೨)ಓರ್ವ ವ್ಯಕ್ತಿ ತನ್ನ ಕರ್ಮಗಳಿಂದಲೇ ದೊಡ್ಡಮನುಷ್ಯನಾಗುತ್ತಾನೆಯೇ ವಿನಃ ಹುಟ್ಟಿನಿಂದಲ್ಲ
೧೩)ನಿಮ್ಮ ಅಂತಸ್ತಿಗೆ ಮೇಲಿರುವ ಅಥವಾ ಕೆಳಗಿರುವ ವ್ಯಕ್ತಿಗಳೊಂದಿಗೆ ಸ್ನೇಹ ಬೆಳೆಸಬೇಡಿ. ಆ ಸ್ನೇಹ ಎಂದಿಗೂ ಸಂತೋಷ ನೀಡುವುದಿಲ್ಲ
೧೪)ನಿಮ್ಮ ಮಗುವನ್ನು ಮೊದಲ ಐದು ವರ್ಷಗಳವರೆಗೆ ಮುದ್ದಾಗಿ ಸಾಕಿರಿ. ಆ ಬಳಿಕ ಐದು ವರ್ಷಗಳಲ್ಲಿ ಮಗು ಎಸಗುವ ತಪ್ಪುಗಳನ್ನು ಬೆದರಿಸಿ ತಿದ್ದಿರಿ. ಹದಿನಾರಾಯಿತೋ, ಸ್ನೇಹಿತನಂತೆ ಕಾಣಿ. ಬೆಳೆದ ಮಕ್ಕಳು ನಿಮ್ಮ ಅತ್ಯಂತ ನಿಕಟ ಸ್ನೇಹಿತರಾಗುತ್ತಾರೆ.
೧೫)ಮೂರ್ಖ ವ್ಯಕ್ತಿಗೆ ಪುಸ್ತಕಗಳು ಅಂಧ ವ್ಯಕ್ತಿಗೆ ಕನ್ನಡಿಗಿರುವಷ್ಟೇ ನಿರುಪಯೋಗಿ
೧೬)ವಿದ್ಯೆಯೇ ನಿಜವಾದ ಸ್ನೇಹಿತ. ವಿದ್ಯಾವಂತನಿಗೆ ಎಲ್ಲೂ ಮನ್ನಣೆಯಿದೆ. ವಿದ್ಯೆಯೇ ನಿಜವಾದ ಭೂಷಣ, ವಿದ್ಯೆ ಎಂದಿಗೂ ಯೌವನ.
ಶನಿವಾರ, ಡಿಸೆಂಬರ್ 26, 2009
ವಿಶ್ವದ ಪ್ರಥಮ ವಿದ್ಯುತ್ ವಿಮಾನ ಯಶಸ್ವಿ ಹಾರಾಟ

